Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೆರೆಯಲ್ಲಿ ಮುಳುಗಿ ತಂದೆ ಹಾಗೂ ಇಬ್ಬರು ಮಕ್ಕಳ ದುರ್ಮರಣ
    ಅಪಘಾತ-ಅಪರಾಧ ಸುದ್ದಿ

    ಕೆರೆಯಲ್ಲಿ ಮುಳುಗಿ ತಂದೆ ಹಾಗೂ ಇಬ್ಬರು ಮಕ್ಕಳ ದುರ್ಮರಣ

    Updated:11/05/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಆಟವಾಡಲೆಂದು ಕೆರೆಯ ಸಮೀಪ ತೆರಳಿದ್ದ ಇಬ್ಬರು ಮಕ್ಕಳು ಹಾಗೂ ಅವರನ್ನು ರಕ್ಷಿಸಲೆಂದು ತೆರಳಿದ ತಂದೆಯೂ ಸೇರಿದಂತೆ ಮೂವರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಸಿದ್ಧಾಪುರ ಸಮೀಪದ ಉಳ್ಳೂರು-74ರಲ್ಲಿ ವರದಿಯಾಗಿದೆ. ಐರ್‌ಬೈಲು ನಿವಾಸಿ ರಾಘವೇಂದ್ರ ಕಿಣಿ (38) ಹಾಗೂ ಅವರ ಮಕ್ಕಳಾದ ಪ್ರಕಾಶ್ (13), ಯೋಗೀಶ್ (12) ಮೃತ ದುರ್ದೈವಿಗಳು. ಕುಂದಾಪ್ರ ಡಾಟ್ ಕಾಂ.

    Click Here

    Call us

    Click Here

    ಘಟನೆಯ ವಿವರ
    ರಾಘವೇಂದ್ರ ಕಿಣಿ  ಅವರ ಇಬ್ಬರು ಮಕ್ಕಳು ತಮ್ಮ ಮನೆಯ ಸಮೀಪದಲ್ಲಿರುವ ತೋಟಕ್ಕೆ ಸ್ನೇಹಿತರೊಂದಿಗೆ ಆಟವಾಡಲೆಂದು ತೆರಳಿದ್ದರು. ಆಟವಾಡುತ್ತಾ ಕೆರೆ ಸಮೀಪ ಬಂದಾಗ ಪ್ರಕಾಶನ ಕಾಲು ಜಾರಿ ಕೆರೆಗೆ ಬಿದ್ದಿದ್ದ. ಆತನ್ನು ರಕ್ಷಿಸಲು ಯೋಗೀಶ್ ಕೂಡ  ಕೆರೆಗೆ ಇಳಿದನಾದರೂ ಇಬ್ಬರೂ  ಕೆರೆಯಲ್ಲಿ ಮುಳುಗುತ್ತಿದ್ದರು. ಇದನ್ನು ಕಂಡ ಆತನ ಸ್ನೇಹಿತರು ಕೂಗಿಕೊಳ್ಳಲಾರಂಭಿದ್ದ. ಕೂಗಾಟ ಕೇಳಿದ ರಾಘವೇಂದ್ರ ಕಿಣಿ ಮನೆಯಿಂದ ಓಡಿಬಂದು ನೋಡಿದ್ದಾರೆ. ಆಳವಿದ್ದ ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಅವರೂ ಕೆರೆಗೆ ಇಳಿದಿದ್ದಾರೆ. ಆದರೆ ಆಳವಿದ್ದ ಕೆರೆಯಲ್ಲಿ ಅವರೂ ಸ್ಥಿಮಿತ ಕಳೆದುಕೊಂಡು  ಮೂವರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ರಾಘವೇಂದ್ರ ಕಿಣಿ ಮೂಲತಃ ಹೊಸನಗರ ತಾಲೂಕಿನ ಜೈನಗರದವರಾಗಿದ್ದು ಐರ್‌ಬೈಲಿನ ತನ್ನ ಜ್ಯೋತಿ ಎಂಬುವವರೊಂದಿಗೆ ವಿವಾಹವಾದ ಬಳಿಕೆ ಅವರ ಮನೆಯಲ್ಲಿಯೇ ವಾಸವಾಗಿದ್ದರು. ಅಡುಗೆ ಹಾಗೂ ಕೃಷಿ ಕೆಲಸವನ್ನು ಮಾಡಿಕೊಂಡಿದ್ದರು. ಕಿಣಿ ಅವರ ಅಡುಗೆ ಈ ಪರಿಸರದಲ್ಲಿ ಬಹಳ ಜನಪ್ರಿಯವಾಗಿತ್ತು.   ಇವರ ಮಕ್ಕಳಾದ ಯೋಗೀಶ್ ಆರನೇ ತರಗತಿ ಪಾಸಾಗಿದ್ದರೇ, ಯೋಗೀಶ್ ಏಳನೇ ತರಗತಿಗೆ ಪಾಸಾಗಿದ್ದರು. ಮೃತ ರಾಘವೇಂದ್ರ ಅವರ ಐರ್‌ಬೈಲು ಮನೆಯಲ್ಲಿ ಮಡದಿ, ಅತ್ತೆ, ಮಾವ ವಾಸವಿದ್ದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರ ಡಿವೈಎಸ್ಪಿ ಮಂಜುನಾಥ ಶೆಟ್ಟಿ, ವೃತ್ತ ನಿರೀಕ್ಷಕ ದಿವಾಕರ್, ಶಂಕರನಾರಾಯಣ ಠಾಣಾಧಿಕಾರಿ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

    ಸಾವಿನಲ್ಲೂ ಒಟ್ಟಿಗೇ ಹೋದರು:

    ಮೃತ ರಾಘವೇಂದ್ರ ಕಿಣಿ ಅವರಿಗೆ ತನ್ನ ಮಕ್ಕಳೆಂದರೆ ಪಂಚಪ್ರಾಣ. ಒಂದು ದಿನವೂ ಅವರನ್ನು ಬಿಟ್ಟಿರುತ್ತಿರಲಿಲ್ಲ. ಮಕ್ಕಳಿಗೆ ಶಾಲೆಗೆ ರಜೆ ಇದ್ದಾಗಲೆಲ್ಲ ತನ್ನೊಂದಿಗೆ ಅಡುಗೆಗೂ ಕರೆದುಕೊಂಡು ಹೋಗುತ್ತಿದ್ದರು. ಕಿಣಿಯವರಿಗೆ ಮಕ್ಕಳು ನೀರಿನಲ್ಲಿ ಮುಳುಗುತ್ತಿರುವುದನ್ನು ನೋಡಿದಾಗಲೇ ಆಘಾತವಾಗಿತ್ತು. ಮಕ್ಕಳ ರಕ್ಷಣೆಗೆ ಇಳಿದವರು ಬದುಕಿ ಬರಲೇ ಇಲ್ಲ. ಮಕ್ಕಳನ್ನು ಹಚ್ಚಿಕೊಳ್ಳುತ್ತಿದ್ದ ತಂದೆ ಸಾವಿನಲ್ಲೂ ಜೊತೆಯಾದರು. ಆದರೆ ಗಂಡ ಮಕ್ಕಳ ಸಾವು ರಾಘವೇಂದ್ರ ಪತ್ನಿ ಹಾಗೂ ಕುಟುಂಬಿಕರನ್ನು ಕಂಗೆಡಿಸಿದೆ.

    Click here

    Click here

    Click here

    Call us

    Call us

    ಘಟನಾ ಸ್ಥಳಕ್ಕೆ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸುಕುಮಾರ ಶೆಟ್ಟಿ, ಜಿಪಂ ಸದಸ್ಯ ತಾರಾನಾಥ ಶೆಟ್ಟಿ ಭೇಟಿನೀಡಿ ಸಂತಾಪ ಸೂಚಿಸಿದ್ದಾರೆ. / ಕುಂದಾಪ್ರ ಡಾಟ್ ಕಾಂ ಸುದ್ದಿ. /

    Ullur-74-Father and 2 sons-died in lake (1)Ullur-74-Father and 2 sons-died in lake (3)Ullur-74-Father and 2 sons-died in lake (4) Ullur-74-Father and 2 sons-died in lake (2)Ullur-74-Father-and-2-sons-

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025

    Comments are closed.

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d