Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದಲ್ಲಿ ಬಸ್ಸುಗಳ ನಡುವೆ ಅಪಘಾತ: ಓರ್ವ ವಿದ್ಯಾರ್ಥಿ ದಾರುಣ ಸಾವು
    Recent post

    ಉಪ್ಪುಂದಲ್ಲಿ ಬಸ್ಸುಗಳ ನಡುವೆ ಅಪಘಾತ: ಓರ್ವ ವಿದ್ಯಾರ್ಥಿ ದಾರುಣ ಸಾವು

    Updated:31/07/20161 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಭಟ್ಕಳದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸರಕಾರಿ ಬಸ್ಸು ಹಾಗೂ ಹುಬ್ಬಳ್ಳಿ ಮುಂಬೈನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸುಗಳ ನಡುವಿನ ಅಫಘಾತದಲ್ಲಿ ಸರಕಾರಿ ಬಸ್ಸಿನಲ್ಲಿದ್ದ ವಿದ್ಯಾರ್ಥಿಯೋಬ್ಬ ಗಂಭೀರವಾಗಿ ಗಾಯಗೊಂಡು ದಾರುಣವಾಗಿ ಮೃತಪಟ್ಟ ಘಟನೆ ಉಪ್ಪುಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವರದಿಯಾಗಿದೆ. ಕುಂದಾಪುರ ಬಿ.ಬಿ. ಹೆಗ್ಡೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿ ರಾಘವೇಂದ್ರ ಶೆಟ್ಟಿ (20) ಮೃತ ದುರ್ದೈವಿ.

    Click Here

    Call us

    Click Here

    ಘಟನೆಯ ವಿವರ:
    ಭಟ್ಕಳದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಉಪ್ಪುಂದದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಮುಂದೆ ಬರುತ್ತಿದ್ದ ವೇಳೆ, ಉಪ್ಪಂದ ಹೋಟೆಲೊಂದರ ಎದುರು ನಿಲ್ಲಿಸಿದ್ದ ವಿಆರ್‌ಎಲ್ ಸಂಸ್ಥೆಯ ವಿಜಯಾನಂದ ಖಾಸಗಿ ವೋಲ್ಪೋ ಬಸ್ಸು ಕುಂದಾಪುರ ಕಡೆಗೆ ಸಾಗಲು ಒಮ್ಮೆಲೇ ರಾಷ್ಟ್ರೀಯ ಹೆದ್ದಾರಿ ಪ್ರವೇಶಿಸಿದ್ದರ ಪರಿಣಾಮ ಹಿಂಬದಿಯ ಬಾಗಿಲು ಹಾಗೂ ಬಾಗಿಲಿನ ಮೆಟ್ಟಿನಿಂದ ಮೇಲೆ ಹತ್ತುತ್ತಿದ್ದ ವಿದ್ಯಾರ್ಥಿಗೆ ಖಾಸಗಿ ಬಸ್ಸಿನ ಮುಂಭಾಗ ಬಡಿದಿತ್ತು. ಅಫಘಾತದ ತೀವ್ರತೆಗೆ ವಿದ್ಯಾರ್ಥಿ ಕೆಳಗೆ ಬಿದ್ದು ತಲೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಆತನನ್ನು ಕುಂದಾಪುರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆಯೇ ಆತ ಮೃತಪಟ್ಟಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಉಪ್ಪುಂದದ ಜನತಾ ಕಾಲೋನಿ ನಿವಾಸಿ ಸದಾಶಿವ ಶೆಟ್ಟಿ ಎಂಬುವವರ ಇಬ್ಬರು ಮಕ್ಕಳಲ್ಲಿ ಹಿರಿಯವನಾದ ರಾಘವೇಂದ್ರ ಶೆಟ್ಟಿ ಕಲಿಕೆಯಲ್ಲಿ ಉತ್ತಮವಾಗಿದ್ದ. ಸೌಮ್ಯ ಸ್ವಭಾವದ ವಿದ್ಯಾರ್ಥಿಯಾಗಿದ್ದ ಆತ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಎನ್ನಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಆಗಮಿಸಿ ತನಿಕೆ ನಡೆಸುತ್ತಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟವಾಡಿ, ಮಾಜಿ ಅಧ್ಯಕ್ಷ ರಾಜು ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ಜಗದೀಶ ದೇವಾಡಿಗ ಮೊದಲಾದವರು ಘಟನಾ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದರು.

    ಕಟ್ಟೆಯೊಡೆದ ಆಕ್ರೋಶ:
    ವಿದ್ಯಾರ್ಥಿ ರಾಘವೇಂದ್ರ ಶೆಟ್ಟಿ ಮೃತಪಟ್ಟ ಸುದ್ದಿ ತಿಳಿಯುತ್ತಲೇ ಎಲ್ಲಾ ಕಾಲೇಜಿನ ಸರಕಾರಿ ಬಸ್ಸಿನ ಅಲಭ್ಯತೆಯ ಬಗ್ಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಯಕ್ಕ ಸರಿಯಾಗಿ ಬಸ್ಸು ಬಾರದೇ ಜನಜಂಗುಳಿಯಾಗುತ್ತಿದೆ. ವಿದ್ಯಾರ್ಥಿಗಳನ್ನು ಎಲ್ಲಾ ಪ್ರಯಾಣಿಕರು ಹತ್ತಿದ ಬಳಿಕ ಕೊನೆಯಲ್ಲಿ ಹತ್ತಿಸಿಕೊಂಡು ಪಾಸ್ ಹೊಂದಿರುವವರು ಎಂಬ ಕಾರಣಕ್ಕಾಗಿ ತಾರತಮ್ಯ ಧೋರಣೆ ತಳೆದಿದ್ದಾರೆ ಎಂದು ತಮ್ಮ ಆಕ್ರೋಶ ಹೊರಗಡವಿದ್ದಾರೆ. ಇನ್ನೊಂಡೆಗೆ ವ್ಯವಸ್ಥೆಯನ್ನು ಖಂಡಿಸಿ ಸ್ಥಳದಲ್ಲಿಯೇ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಸದ್ಯ ವಿದ್ಯಾರ್ಥಿಗಳು ಹೆದ್ದಾರಿ ತಡೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ./ಕುಂದಾಪ್ರ ಡಾಟ್ ಕಾಂ ಸುದ್ದಿ/

    Click here

    Click here

    Click here

    Click Here

    Call us

    Call us

     

    Uppunda KSRTC bus and VRL Bus accident. student spotout (1) Uppunda KSRTC bus and VRL Bus accident. student spotout (2) Uppunda KSRTC bus and VRL Bus accident. student spotout (3) Uppunda KSRTC bus and VRL Bus accident. student spotout (4)Uppunda KSRTC bus and VRL Bus accident. student spotout (5) Uppunda KSRTC bus and VRL Bus accident. student spotout (6) Uppunda KSRTC bus and VRL Bus accident. student spotout (7)

    Uppunda student Raghavendra died in bus accident
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    1 Comment

    1. Pingback: ಉಪ್ಪುಂದದಲ್ಲಿ ವಿದ್ಯಾರ್ಥಿ ಸಾವು: 2 ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ತಡೆ. ಎಸ್ಪಿ ಅಣ್ಣಾಮಲೈ ಭೇಟಿ | Kundapra.com ಕುಂದಾಪ

    Leave A Reply Cancel Reply

    17 − two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.