Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾತನಾಡುವ ಮಹಾಲಿಂಗ ಉಳ್ತೂರು ಶ್ರೀ ಮಹಾಲಿಂಗೇಶ್ವರ
    ಧಾರ್ಮಿಕ ಕೇಂದ್ರ

    ಮಾತನಾಡುವ ಮಹಾಲಿಂಗ ಉಳ್ತೂರು ಶ್ರೀ ಮಹಾಲಿಂಗೇಶ್ವರ

    Updated:24/02/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ
    ಕುಂದಾಪುರ: ಮಾತನಾಡುವ ಮಹಾಲಿಂಗ ಎಂದೇ ಪ್ರಖ್ಯಾತಿ ಪಡೆದಿರುವ ಕುಂದಾಪುರ ತಾಲೂಕಿನ ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಧಿದೇವ ಶ್ರೀ ಮಹಾಲಿಂಗೇಶ್ವರ ನಿಷ್ಠೆಯಿಂದ ನಂಬಿದ ಭಕ್ತಾದಿಗಳ ಕನಸು ನನಸು ಮಾಡಿದ ಸಾಕಾರ ಮೂರ್ತಿ. ನಂಬಿದ ಭಕ್ತರ ಬಾಳಿನ ಬದುಕಿನಲ್ಲಿ ಸಂತೃಪ್ತಿಯ ನೆಲೆಯನ್ನು ನೀಡಿದ ಚೈತನ್ಯ ಸ್ವರೂಪಿ.

    Click Here

    Call us

    Click Here

    ತೆಕ್ಕಟ್ಟೆಯಿಂದ 2.5ಕಿ.ಮೀ ದೂರದಲ್ಲಿರುವ ಪ್ರಾಚೀನ ಶಿವಾಲಯವು ಸುಮಾರು 11-12ನೇ ಶತಮಾನದ್ದು ಎಂದು ಅಂದಾಜಿಸಲಾಗಿದೆ. ವಿಜಯನಗರ ಅರಸರ ಕಾಲದಲ್ಲಿ ದೇವಾಲಯವು ಉಚ್ಛ್ರಾಯ ಸ್ಥಿತಿಯಲ್ಲಿದ್ದುದರ ಬಗ್ಗೆ ಶಾಸನಗಳಲ್ಲಿ ಉಲ್ಲೇಖವಿದೆ. ೧೪೨೮ರಲ್ಲಿ ಬಾರಕೂರಿನ ರಾಜರುಗಳಿಂದ ದೇವಳಕ್ಕೆ ದಾನ, ಉಂಬಳಿ ನೀಡಿರುವ ಬಗ್ಗೆ ಶಾಸನಗಳಿವೆ. ಪುರಣ ಪುರಷರಾದ ಶ್ರೀ ಶೃಂಗೇರಿ ಜಗದ್ಗುರು ಪರಮಪೂಜ್ಯ ಸ್ವಾಮೀಜಿಯವರಿಂದ ಪುನಃ ಪ್ರತಿಷ್ಠೆಗೊಂಡಿರುವ ಐತಿಹ್ಯವಿದೆ ಈ ದೇವಾಲಯಕ್ಕಿದೆ.
    ದೇವಸ್ಥಾನದಲ್ಲಿ ಆಗಮೋಕ್ತ ವಿಧಿವಿಧಾನಗಳಿಂದ ನಿತ್ಯಪೂಜೆ ಜರುಗುತ್ತಿದೆ. ಉಳ್ತೂರು ಸೀಮೆಯ ಆರಾಧ್ಯ ದೇವರಾಗಿರುವ ಶ್ರೀ ಮಹಾಲಿಂಗೇಶ್ವರನನ್ನು ವೋಳತ್ತೂರು ಕೇರಿಯ ಮಹಾದೇವ, ಮತಾನಾಡುವ ಮಹಾಲಿಂಗ ಎಂಬಿತ್ಯಾದಿ ಹೆಸರುಗಳಿಂದ ಕರೆಯಲಾಗುತ್ತಿರುವುದು ಕ್ಷೇತ್ರದ ಮಹಿಮೆಯನ್ನು ಸಾರಿ ಹೇಳುತ್ತದೆ. ಒಂದು ಕಾಲದಲ್ಲಿ ಉಚ್ಛ್ರಾಯ ಸ್ಥಿತಿಯಲ್ಲಿದ್ದ ದೇವಾಲಯ ಕ್ರಮೇಣ ಪ್ರಾಕೃತಿಕ ಸನ್ನಿವೇಶಗಳಿಗೆ ಮಯ್ಯೊಡ್ಡಿ ಶಿಥಿಲಗೊಂಡಿತ್ತು. ಇತ್ತಿಚಿಗೆ ಮತ್ತೆ ಊರ ಪ್ರಮುಖರ ನೇತೃತ್ವದಲ್ಲಿ ದೇವಸ್ಥಾನದ ಜೀಣೋದ್ಧಾರ ಕಾರ್ಯ ನಡೆದಿದ್ದು ಪ್ರಥಮ ಹಂತವಾಗಿ ಹೊರ ಹೆಬ್ಬಾಗಿಲು ಮತ್ತು ವಸಂತ ಮಂಟಪ, ರಥದ ಮನೆ ಮತ್ತು ನೂತನ ನಂದಿ ವಿಗ್ರಹ ಬಳಿಕ ದೇವಸ್ಥಾನದ ಗರ್ಭಗುಡಿ, ತೀರ್ಥಮಂಟಪ, ಒಳಹೆಬ್ಬಾಗಿಲು ಮತ್ತು ಒಳಸುತ್ತಿನ ಕಲ್ಲು ಹಾಸು ಕಾರ್ಯ ಪೂರ್ಣಗೊಂಡಿದೆ.

    ನೂತನವಾಗಿ ಶಿಲಾಮಯಗೊಂಡ ಗರ್ಭಗುಡಿ, ತೀರ್ಥಮಂಟಪ ಸಮರ್ಪಣಾ ಕಾರ್ಯ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯವು ಫೆಬ್ರವರಿ 7ರಿಂದ ಮೊದಲ್ಗೊಂಡು ಫೆಬ್ರವರಿ 9ರ ತನಕ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳು ವೇದಮೂರ್ತಿ ಸುಬ್ರಹ್ಮಣ್ಯ ಅಡಿಗರ ನೇತೃತ್ವದಲ್ಲಿ ಹಾಗೂ ವೇದಮೂರ್ತಿ ಬಾರಕೂರು ಹೃಷಿಕೇಶ ಬಾಯರಿಯವರ ಮಾರ್ಗದರ್ಶನದಲ್ಲಿ ಮತ್ತು ದೇವಸ್ಥಾನದ ಪ್ರಧಾನ ಅರ್ಚಕರಾದ ಸೀತಾರಾಮ ಅಡಿಗ ಉಳ್ತೂರು ಇವರ ಮುಂದಾಳತ್ವದಲ್ಲಿ ಜರುಗಲಿದೆ. ದೇವಸ್ಥಾನದ ಜೀಣೋದ್ಧಾರ ಸಮಿತಿ ಅಧ್ಯಕ್ಷರಾದ ಮಂಬೈ ವಾಸಿ ಉಳ್ತೂರು ಶ್ರೀ ಮೋಹನದಾಸ ಶೆಟ್ಟಿ ಕಟ್ಟೆಮನೆ ಅವರ ನೇತೃತ್ವ, ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ ಹಲ್ತೂರು ಮೇಲ್ಮನೆ ಅವರ ಮಾರ್ಗದರ್ಶನದಲ್ಲಿ ಊರ ನಾಗರೀಕರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಯಶಸ್ವಿಯಾಗಿ ನೆರವೇರಿದೆ.

     

    Like this:

    Like Loading...

    Related

    Mahatobara Shri Mahalingeshwara temple Ulturu
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d