Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆ: ಮಕ್ಕಳ ಸರ್ವತೋಮುಖ ವಿಕಾಸದ ದಿಕ್ಸೂಚಿ
    Recent post

    ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆ: ಮಕ್ಕಳ ಸರ್ವತೋಮುಖ ವಿಕಾಸದ ದಿಕ್ಸೂಚಿ

    Updated:20/05/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ |
    ಸುತ್ತಲೂ ಗಿಡಮರಗಳಿಂದ ಕಂಗೊಳಿಸುವ ಪ್ರಶಾಂತ ಪರಿಸರದ ನಡುವೆ ಪ್ರಾಚೀನ ಮಾದರಿಯ ಶಿಕ್ಷಣ ಪದ್ದತಿಯನ್ನು ನೆನಪಿಸುವ ಸುಂದರ ವಾತಾವರಣ. ಇದರ ನಡುವೆ ಆಧುನಿಕ ಶಿಕ್ಷಣದ ಎಲ್ಲಾ ಆಯಾಮಗಳನ್ನು ಒಳಗೊಂಡು ರಾಷ್ಟ್ರ ಮಟ್ಟದಲ್ಲಿ ಗುರುತಿಸಬಹುದಾದ ಉತ್ಕೃಷ್ಟ ಶೈಕ್ಷಣಿಕ ಸಂಸ್ಥೆಯಾಗಿ ಖ್ಯಾತಿವೆತ್ತಿರುವ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳು. ಕ್ಯಾಂಪಸ್‌ನ ಹೊರನೋಟದಲ್ಲೇ ಒಂದು ಸಾತ್ವಿಕ ಶೈಕ್ಷಣಿಕ ವಾತಾವರಣ ಮನಸ್ಸಿನ ಒಡಮೂಡುತ್ತದೆ. ನೋಟಕ್ಕೆ ನಿಲುಕಿದಂತೆ ಎಲ್ಲವೂ ಅಚ್ಚುಕಟ್ಟಾಗಿ ಅನುಷ್ಠಾನಗೊಂಡಿದೆ. ಕುಂದಾಪುರ ತಾಲೂಕಿನ ವಕ್ವಾಡಿಯಲ್ಲಿರುವ ಪ್ರತಿಷ್ಠಿತ ಗುರುಕುಲ ಪಬ್ಲಿಕ್ ಸ್ಕೂಲ್ ಹಾಗೂ ಗುರುಕುಲ ಪಿಯು ಕಾಲೇಜು ತನ್ನದೇ ಆದ ಹತ್ತಾರು ವೈಶಿಷ್ಟ್ಯತೆಗಳಿಂದ ಇಂದು ಮನೆಮಾತಾಗಿದೆ.

    Click Here

    Call us

    Click Here

    ಶಿಕ್ಷಣವೂ ಅರಿವು, ಉದ್ಯೋಗವನ್ನು ನೀಡುವುದರ ಜೊತೆಗೆ ಅದು ಪ್ರತಿ ವಿದ್ಯಾರ್ಥಿಯನ್ನು ಒಬ್ಬ ಸಜ್ಜನ ನಾಗರಿಕನನ್ನಾಗಿಸಬೇಕು ಎಂಬ ಮಾತಿಗೆ ಕಟಿಬದ್ಧರಾಗಿ, ವಿಶ್ವಾಸವೇ ನಮ್ಮ ಯಶಸ್ಸೆಂಬ ಧ್ಯೇಯವಾಕ್ಯದೊಂದಿಗೆ ಬಾಂಡ್ಯ ಎಜುಕೇಶನಲ್ ಟ್ರಸ್ಟ್ ಮೂಲಕ ಆರಂಭಗೊಂಡ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳು ಇಂದು ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆಯ ಬೆಳಕು ಚಲ್ಲಿ ಆಂತರ್ಯದಲ್ಲಿ ಜ್ಞಾನಜ್ಯೋತಿಯನ್ನು ಬೆಳಗಿಸಿದೆ. |ಕುಂದಾಪ್ರ ಡಾಟ್

    ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಅನುಕೂಲಕರವಾದ ವಾತಾವರಣವನ್ನು ನಿರ್ಮಿಸಿ ಅವರನ್ನು ಸಮಾಜದ ಪ್ರಮುಖ ಆಸ್ತಿಯಾಗಿ ರೂಪಿಸುವ ಸಂಕಲ್ಪ ತೊಟ್ಟು, ಕುಂದಾಪುರದ ಸುತ್ತ ಮುತ್ತಲಿನ ಹಾಗೂ ರಾಜ್ಯದ ನಾನಾ ಭಾಗಗಳಿಂದ ಆಗಮಿಸುತ್ತಿರುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಸಂಸ್ಥೆಯಾಗಿ ರೂಪುಗೊಂಡಿದೆ ವಕ್ವಾಡಿ ಗುರುಕುಲ ಶಿಕ್ಷಣ ಸಂಸ್ಥೆ.

    ಗೌಜು ಗದ್ದಲವಿಲ್ಲದ ನಿತ್ಯ ನಿರ್ಮಲ ನಿಸರ್ಗದ ವಿಶಾಲವಾದ ಛಾವಣಿಯ ಅಡಿಯಲ್ಲಿ ಗುರುಕುಲ ಕ್ಯಾಂಪಸ್ ಇದ್ದು, ಪೂರ್ವ ಪ್ರ್ರಾಥಮಿಕ ಹಂತದಿಂದ ಪದವಿಪೂರ್ವ ಕಾಲೇಜುವರೆಗಿನ ಕಲಿಕೆಗೆ ಅನುಕೂಲಕರವಾದ ವಾತವರಣ ಹೊಂದಿದ ಪ್ರಮುಖ ಸಂಸ್ಥೆಯಾಗಿದೆ.

    ಪುಟಾಣಿ ಮಕ್ಕಳಿಗೆ – ಕ್ರೀಯಾಶೀಲ ಮೊಂಟೆಸರಿ ಶಿಕ್ಷಣ ಪದ್ದತಿ:
    ಆಟದೊಂದಿಗೆ ಕಲಿಕೆಯು ಸಾಪಲ್ಯಗೊಳ್ಳುತ್ತದೆ ಅದಕ್ಕಾಗಿ ಮೊಂಟೆಸರಿ ಶಿಕ್ಷಣ ಪದ್ದತಿಯ ಮೂಲಕ ಪೂರ್ವ ಪ್ರಾಥಮಿಕ ಮುದ್ದು ಮಕ್ಕಳ ಬದುಕಿನ ಸ್ಪಷ್ಟ ಗುರಿ ರೂಪಿಸುವ ಕಾರ್ಯವನ್ನು ಗುರುಕುಲ ಅತ್ಯಂತ ಪರಿಣಾಮಕಾರಿಯಾಗಿ ಅನ್ವಯಿಸುತ್ತಿರುವುದು ಪ್ರಸಕ್ತ ವರ್ಷದಲ್ಲಿ 180ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಂಖ್ಯೆಯು ನಿದರ್ಶನವಾಗಿದೆ.

    Click here

    Click here

    Click here

    Call us

    Call us

    ಸಿ.ಬಿ.ಎಸ್.ಇ. ಪಠ್ಯಕ್ರಮ:
    ಗುರುಕುಲದಲ್ಲಿ 1ನೇ ತರಗತಿಯಿಂದ ೧೦ನೇ ತರಗತಿವರೆಗೆ ಸಿ.ಬಿ.ಎಸ್.ಇ ಪಠ್ಯಕ್ರಮಕ್ಕೆ ಮಾನ್ಯತೆ ಪಡೆದಿದ್ದು, ಪ್ರತಿ ವರ್ಷವೂ ಇದಕ್ಕೆ ಅನುಗುಣವಾಗಿ ವಾರ್ಷಿಕ ಕ್ರೀಯಾಯೋಜನೆಯನ್ನು ರೂಪಿಸಿ ಪರಿಣಾಮಕಾರಿಯಾಗಿ ಅನ್ವಯಿಸಲು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರನ್ನೊಳಗೋಡ ಶಿಕ್ಷಕವೃಂದದ ನಿರಂತರ ಕೈಂಕರ್ಯ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.

    [quote bgcolor=”#ffffff” bcolor=”#bf2e2b” arrow=”yes” align=”right”]ಸಿ.ಬಿ.ಎಸ್.ಇ. ಪರಿಕ್ಷಾ ಫಲಿತಾಂಶ ಶೇ.100ಸಾಧನೆ:
    ಗುಣಮಟ್ಟದ ಭೋದನೆ ಮತ್ತು ವಿದ್ಯಾರ್ಥಿಗಳ ನಿರಂತರ ಪರಿಶ್ರಮದಿಂದ ಈ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಉನ್ನತ ವ್ಯಾಸಂಗಕ್ಕೆ ಸಂಪೂರ್ಣ ವಿಶ್ವಾಸದಿಂದ ಮುನ್ನುಗುತ್ತಿದ್ದಾರೆ. ಸತತ 6 ಬಾರಿ ಸಿ.ಬಿ.ಎಸ್.ಇ ವಾರ್ಷಿಕ ಪರಿಕ್ಷೆಯಲ್ಲಿ ಶೇ.100 ಪ್ರತಿಶತ ಫಲಿತಾಂಶವನ್ನು ಪಡೆದು ಜಿಲ್ಲೆಯಲ್ಲಿಯೇ ಈ ಸಂಸ್ಥೆ ಗುರುತ್ವವನ್ನು ಸಾಧಿಸಿದೆ.[/quote]

    ಐ.ಎಸ್.ಒ ಸರ್ಟಿಫಿಕೆಟ್:
    ಮೌಲ್ಯಾಧಾರಿತ ಗುಣಮಟ್ಟ ಮತ್ತು ಕ್ರಮಬದ್ಧ ಶಿಕ್ಷಣ ವ್ಯವಸ್ಥೆಯನ್ನು ಪ್ರಮಾಣಿಕರಿಸಿ ಪ್ರತಿಷ್ಠಿತ ಅಂತರಾಷ್ಟ್ರೀಯ ಗುಣಮಟ್ಟ ಮೌಲ್ಯಮಾಪನ ಸಂಸ್ಥೆಯಾದ ಐ.ಎಸ್.ಒ ದಿಂದ ಈ ಸಂಸ್ಥೆಯು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಸರ್ಟಿಫಿಕೆಟನ್ನು ಪಡೆದು ಇನ್ನು ಹೆಚ್ಚಿನ ಗುರಿಯೊಂದಿಗೆ ಕೆಲಸ ನಿರ್ವಹಿಸುತ್ತಿದೆ.

    ಟಾಟಾ ಸ್ಮಾರ್ಟ್ ಕ್ಲಾಸ್ ಅಳವಡಿಕೆ:
    ವಿದ್ಯಾರ್ಥಿಗಳು ಸಂಪೂರ್ಣವಾಗಿ ಕಲಿಕಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಹಾಗೂ ಕ್ಲಿಷ್ಟವಾದ ಪರಿಕಲ್ಪನೆಗಳನ್ನು ಸರಳವಾಗಿ ಹಾಗೂ ಮನಮುಟ್ಟುವಂತೆ ಬೋಧಿಸಲು ಟಾಟಾ ಸ್ಮಾರ್ಟ್ ಕ್ಲಾಸ್ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಕಲಿಕಾ ಬೋಧನೆ ನಿರಂತರವಾಗಿ ನೀಡಲಾಗುತ್ತಿದೆ.

    ಸ್ಪರ್ಧಾತ್ಮಕ ಪರಿಕ್ಷೆಗಳ ತರಬೇತಿ:
    ಗುರುಕುಲ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸತತ ಮೂರು ವರ್ಷಗಳ ವರೆಗೆ, ರಾಜ್ಯ ಮತ್ತು ರಾಷ್ಟ್ರೀಯ ಸ್ಪಧಾತ್ಮಕ ಪರೀಕ್ಷಾ ತರಭೇತಿಯನ್ನು ನುರಿತ ಮತ್ತು ಕೌಶಲ್ಯ ಪೂರಿತ ಕಾಲೇಜು ಉಪನ್ಯಾಸಕ ವೃಂದದಿಂದ ನೀಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸು ಗಳ ಪ್ರವೇಶಾತಿ ಪರೀಕ್ಷೆಗಳಾದ ಸಿ.ಇ.ಟಿ, ಕೊಮೆಡ್ ಕೆ, ಜೆಇಇ, ಮತ್ತು ಸಿ.ಪಿ.ಟಿ ಇವೆ ಮುಂತಾದ ಪರೀಕ್ಷೆಗಳನ್ನು ಎದುರಿಸಲು ಸಹಾಯವಾಗುತ್ತಿದೆ.

    ಎಜ್ಯುಸ್ಪೋರ್ಟ್ಸ್ ಸಹಯೋಗ:
    ವಿದ್ಯಾರ್ಥಿಗಳ ಕ್ರೀಡಾಸಾಮರ್ಥ್ಯ ವನ್ನು ಹೆಚ್ಚಿಸಲು ಎಜ್ಯುಸ್ಪೋರ್ಟ್ಸ್ ಸಂಸ್ಥೆಯ ಸಹಯೋಗವನ್ನು ಗುರುಕುಲ ಪಡೆದಿದೆ. ಪ್ರತಿದಿನವು ಬೇರೆ ಬೇರೆ ರೀತಿಯ ಕ್ರೀಡಾನೈಪುಣ್ಯವನ್ನು ಹೆಚ್ಚಿಸುವ ಆಟಗಳು ಮಕ್ಕಳನ್ನು ಕ್ರೀಯಾಶೀಲರನ್ನಾಗಿ ಮಾಡಿ ಜ್ಞಾನಾರ್ಜನೆಯಲ್ಲಿ ಆಸಕ್ತಿ ಹುಟ್ಟಿಸುವಲ್ಲಿ ಈ ಸಂಸ್ಥೆ ನಿರಂತರವಾಗಿ ಶ್ರಮಿಸುತ್ತಿದೆ.

    ಸುಸಜ್ಜಿತವಾದ ಪ್ರಯೋಗಾಲಯ ಹಾಗೂ ಗ್ರಂಥಾಲಯ:
    ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಜೀವಶಾಸ್ತ್ರದ ವಿವಿಧ ಪರಿಕಲ್ಪನೆಗಳನ್ನು ಅರ್ಥಮಾಡಿಕೊಳ್ಳಲು ಸುಸಜ್ಜಿತವಾದ ಪ್ರಯೋಗಾಲಯವನ್ನು ಈ ಶಾಲೆ ಹೊಂದಿರುವುದರ ಜೊತೆಗೆ ನುರಿತ ಶಿಕ್ಷಕ ವೃಂದದವರಿಂದ ಪ್ರತಿ ವಾರಾಂತ್ಯವನ್ನು ಪ್ರಾಯೋಗಿಕ ಅವಧಿಗಳನ್ನಾಗಿ ಮಾರ್ಪಾಡು ಮಾಡಲಾಗಿದೆ. ಅಲ್ಲದೇ ಮಕ್ಕಳಿಗೆ ಓದಲು ಆಸಕ್ತಿಯನ್ನು ಹೆಚ್ಚಿಸಲು ಪ್ರಶಾಂತವಾದ ಗ್ರಂಥಾಲಯದ ವ್ಯವಸ್ಥೆ ಹೊಂದಿದೆ.

    ಹಾಸ್ಟೆಲ್ ಸೌಲಭ್ಯ:
    ಹುಡುಗ ಮತ್ತು ಹುಡುಗಿಯರಿಗೆ ಪ್ರತ್ಯೇಕವಾದ ಹಾಸ್ಟೆಲ್ ವ್ಯವಸ್ಥೆಯನ್ನು ರಾಜ್ಯದ ನಾನಾ ಭಾಗಗಳಿಂದ ಬರುವ ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿದೆ. ವಿಶಾಲವಾದ ಕೊಠಡಿಗಳ ವ್ಯವಸ್ಥೆ, ಶುಚಿತ್ವ ಮತ್ತು ಉತ್ತಮ ಗುಣಮಟ್ಟದ ಪೌಷ್ಠಿಕ ಆಹಾರ, ನಿರಂತರ ವೈದ್ಯಕೀಯ ಸೌಲಭ್ಯ ಇವೆ ಮುಂತಾದ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿದೆ.

    ಇತರ ಅವಕಾಶಗಳು:
    ಶೈಕ್ಷಣಿಕ ವರ್ಷದ ಎಲ್ಲಾ ಸಮಯದಲ್ಲೂ ಅತ್ಯಂತ ಚಟುವಟಿಕೆಯಿಂದ ಕೂಡಿದ ವಿದ್ಯಾಲಯವಾಗಿದೆ. ವ್ಯಕ್ತಿತ್ವ ವಿಕಸನ ಕಾರ್ಯಗಾರ, ರಾಷ್ಟ್ರಮಟ್ಟದ ಕಲಾಶಿಬಿರ, ಗಾಳಿಪಟ ಉತ್ಸವ, ಹಸಿರು ದಿನಾಚರಣೆ, ಅಜ್ಜ-ಅಜ್ಜಿಯಂದಿರ ದಿನಾಚರಣೆ, ಭೌದ್ಧಿಕ ವಿಕಸನ ಕಾರ್ಯಕ್ರಮ, ಚದುರಂಗ, ನೃತ್ಯ, ಸ್ಕೇಟಿಂಗ್, ಕುದುರೆ ಸವಾರಿ, ಕರಾಟೆ ಇವೆ ಮುಂತಾದ ಇತರ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರುತ್ತದೆ.

    ಪ್ರತಿಷ್ಠಿತ Gurukula-trusteeಸಂಸ್ಥೆಯ ರೂವಾರಿಗಳು:
    ಕಡಿಮೆ ಅವಧಿಯಲ್ಲಿ ಉತ್ಕೃಷ್ಟವಾದ ಶಿಕ್ಷಣವನ್ನು ನೀಡುವ ಮೂಲಕ ಮನೆಮಾತಾಗಿರುವ ಗುರುಕುಲ ಪಬ್ಲಿಕ್ ಸ್ಕೂಲ್ ಹಾಗೂ ಪಿಯು ಶಿಕ್ಷಣ ಸಂಸ್ಥೆಗಳು ಬಾಂಡ್ಯ ಎಜುಕೇಶನಲ್ ಟ್ರಸ್ಟ್ ಆಡಳಿತಕ್ಕೊಳಪಟ್ಟಿದೆ. ಟ್ರಸ್ಟ್‌ನ ಸ್ಥಾಪಕಾಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ರಂಗದಲ್ಲಿ ತೊಡಗಿಸಿಕೊಂಡಿರುವ ಶಿಕ್ಷಣ ಚಿಂತಕ ಬಿ. ಅಪ್ಪಣ್ಣ ಹೆಗ್ಡೆ ಅವರಿದ್ದರೇ, ಸಂಸ್ಥೆಯ ಸರ್ವತೋಮುಖ ಬೆಳವಣಿಗೆಯಲ್ಲಿ ಟ್ರಸ್ಟೀಗಳಾದ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ಹಾಗೂ ಅನುಪಮಾ ಎಸ್. ಶೆಟ್ಟಿ ಶ್ರಮಿಸುತ್ತಿದ್ದಾರೆ. ಹೊಸ ಹೊಸ ಪರಿಕಲ್ಪನೆಗಳ ಮೂಲಕ ನಿರಂತರವಾಗಿ ಶೈಕ್ಷಣಿಕ ಸಾಧನೆಯನ್ನು ತೋರುತ್ತಿರುವುದಲ್ಲದೇ, ಕಲೆ, ಸಾಹಿತ್ಯ, ಸಂಗೀತ, ಕ್ರೀಡಾ ಕ್ಷೇತ್ರದಲ್ಲಿಯೂ ವಿದ್ಯಾರ್ಥಿಗಳ ಆಸಕ್ತಿಗನುಗುಣವಾಗಿ ಕಲಿಗೆ ನೆರವಾಗುವ ಮೂಲಕ ಗುರುಕುಲ ಬದುಕಿನ ಶಿಕ್ಷಣನವನ್ನು ಯಶಸಿಯಾಗಿ ನೀಡುತ್ತಿರುವುದರ ಹಿಂದೆ ಇವರುಗಳ ದೊಡ್ಡ ಶ್ರಮವಿದೆ. ಶಿಕ್ಷಣದ ನೈಜ ಉದ್ದೇಶವನ್ನು ಸಾರ್ಥಕ್ಯಗೊಳಿಸುವಲ್ಲಿ ಗುರುಕುಲ ಯಶಸ್ವಿಯಾಗಿದೆ.

    ಗುರುಕುಲ ಇಲ್ಲಿದೆ:
    ಶೈಕ್ಷಣಿಕ ವರ್ಷ 2017-18ರ ಪ್ರವೇಶಾತಿ ಪ್ರಾರಂಭವಾಗಿದ್ದು ಪೂರ್ವ ಪ್ರಾಥಮಿಕದಿಂದ ಕಾಲೇಜುವರೆಗಿನ ಶಿಕ್ಷಣ ಮಕ್ಕಳಿಗೆ ನೀಡಲು ಬಯಸುವ ಪಾಲಕರು ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಬಹುದಾಗಿದೆ.
    Gurukula Public school,
    Anupam Enclave
    Halady road, vakwady
    Koteshwara- 576257
    Kundapura.
    Ph:08254-262887
    Mob: 9482098367

    Email:gurukulpublicschool@gmail.com
    www.bhandyagurukula.com
    ► ವಕ್ವಾಡಿ ಗುರುಕುಲ ಪದವಿಪೂರ್ವ ಮಹಾವಿದ್ಯಾಲಯ: ವಿದ್ಯಾರ್ಥಿಗಳಿಗೆ ಅವಕಾಶಗಳ ಆಗರ! – http://kundapraa.com/?p=23057

    Gurukula Public school5

    Like this:

    Like Loading...

    Related

    Gurukula Public School
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

    05/12/2025

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    05/12/2025

    ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d