Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಕ್ರಮ ಮರಳುಗಾರಿಕೆ : ನೆಮ್ಮದಿಯ ಬದುಕಿಗೆ ನಿವಾಸಿಗಳ ಮನವಿ
    ವಿಶೇಷ ವರದಿ

    ಅಕ್ರಮ ಮರಳುಗಾರಿಕೆ : ನೆಮ್ಮದಿಯ ಬದುಕಿಗೆ ನಿವಾಸಿಗಳ ಮನವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ತಾಲೂಕಿನ ಬಸ್ರೂರು ಗ್ರಾಮದ ಹಟ್ಟಿಕುದ್ರು ಎಂಬಲ್ಲಿ ಮರಳುಗಾರಿಕೆಗೆ ನಿಷೇಧಿವಿದ್ದರೂ ಕೂಡ ಅವ್ಯಾಹತವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಸ.ನಂ.1 ಮತ್ತು 239ನೇ ಸ್ಥಳದ 400 ಎಕರೆ ಪ್ರದೇಶದಲ್ಲಿ ಪ್ರಾಕೃತಿಕ ಸಂಪತ್ತಿನ ಲೂಟಿ ನಡೆಯುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ಸ್ಥಳೀಯರು ಮನವಿ ಮಾಡಿದರೂ ಕೂಡ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದೇ ಇಲಾಖೆ ದಿವ್ಯ ಮೌನವಹಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

    Click Here

    Call us

    Click Here

    ಬಸ್ರೂರು ಗ್ರಾಮದ ಆನಗಳ್ಳಿ ರಸ್ತೆಯ ರೈಲ್ವೇ ಸೇತುವೆ 10ಮೀ. ಕೆಳಭಾಗದಲ್ಲಿ ಹಟ್ಟಿಕುದ್ರು ಭಾಗದ 10 ಎಕರೆ ಜಾಗವನ್ನೊಳಗೊಂಡಿರುವ ಜಾನುವಾರುಗಳ ಮೇವಿಗಾಗಿ ಖಾರೀದಿಸಿದ ಹಾಗೂ ಕೃಷಿ ಚಟುವಟಿಕೆ ನಡೆಯುವ ಸ್ಥಳಭಾಗದಲ್ಲಿ ಅವ್ಯಾಹತವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿ ಮತ್ತು ಹಿರಿಯ ಭೂವಿಜ್ಞಾನ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸ್ಥಳೀಯ ಗ್ರಾಮಸ್ಥರು ಮಾಹಿತಿ, ಮನವಿ ನೀಡಿದ್ದರೂ ಜಿಲ್ಲಾಡಳಿತ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಬಸ್ರೂರು ಮತ್ತು ಹಟ್ಟಿಕುದ್ರು ನಡುವೆ ಇರುವ ಕುದ್ರು(ದ್ವೀಪ)ನಲ್ಲಿ ಈ ಹಿಂದೆ ಭತ್ತ ಬೆಳೆಯಲಾಗುತ್ತಿತ್ತು. ಬಳಿಕ ಕಂದಾಯ ಮತ್ತು ಅರಣ್ಯ ಇಲಾಖೆ ಜಾನುವಾರುಗಳ ಮೇವಿಗಾಗಿ ಗೋಮಾಳವಾಗಿ ಪರಿವರ್ತಿಸಿದ್ದರು. ಅಕ್ರಮ ಮರಳುಗಾರಿಕೆಯ ಹಿನ್ನಲೆಯಲ್ಲಿ ನದಿಯಲ್ಲಿ 25 ರಿಂದ 30 ಅಡಿ ಆಳವಾಗಿರುವುದರಿಂದ ಜಾನುವಾರುಗಳನ್ನು ನದಿ ದಾಟಿಸಿ ಮೇಯಲು ಬಿಡಲು ಕಷ್ಟವಾಗುತ್ತಿದೆ. ಇದೇ ಭಾಗದಲ್ಲಿ ಕೊಂಕಣ ರೈಲ್ವೇ ಹಾದುಹೋಗುತ್ತಿದೆ. ರೈಲ್ವೇ ಹಳಿಯ ಕೆಳ ಭಾಗದಲ್ಲಿ ಹಗಲು ರಾತ್ರಿ ನಿರಂತರ ಮರಳುಗಾರಿಕೆ ನಡೆಯುತ್ತಿರುವುದರಿಂದ ಹಳಿಗೆ ಆಧಾರವಾಗಿ ಹಾಕಲ್ಪಟ್ಟ ಕಂಬಗಳು ಅಪಾಯದಂಚಿನಲ್ಲಿದೆ. ರೈಲ್ವೆ ಹಳಿ ಹಾದು ಹೋಗುವ ಆಸು ಪಾಸಿನಲ್ಲಿ ನೂರಾರು ಮನೆಗಳಿದ್ದು ಆತಂಕದ ಜೀವನ ನಡೆಸುತ್ತಿದ್ದಾರೆ. ಬೆಳಗಿನ ಜಾವ 5ರಿಂದ ರಾತ್ರಿ 8ರವರೆಗೆ ಐದಾರು ಗುಂಪುಗಳಲ್ಲಿ ದಿನವೋಂದಕ್ಕೆ 50ರಿಂದ 60 ಲೋಡ್ ಮರಳು ಸಾಗಾಟವಾಗುತ್ತಿದ್ದು ಭಾರಿ ಗಾತ್ರದ ಲಾರಿಗಳ ಒಡಾಟದಿಂದ ರಸ್ತೆಗಳು ಹದಗೆಟ್ಟಿವೆ. ಕಿರಿದಾದ ರಸ್ತೆಗಳ ಅಕ್ಕಪಕ್ಕದಲ್ಲಿ ನೂರಾರು ಮನೆಗಳಿದ್ದು ಸ್ಥಳೀಯರು ಮುಂದಾಗುವ ಅಪಾಯವನ್ನರಿತು ಕಂಗಾಲಾಗಿದ್ದಾರೆ

    ಕುಡಿಯುವ ನೀರಿನ ಸಮಸ್ಯೆ: ಹಟ್ಟಿಕುದ್ರುವಿನಲ್ಲಿ 250 ಮನೆಗಳಿದ್ದು, 2500ಕ್ಕೂ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ. ಇಲ್ಲಿನ ಪ್ರತಿ ಮನೆಯವರು ಬಾವಿ ನೀರನ್ನೆ ಅವಲಂಬಿಸ ಬೇಕಾಗಿದ್ದು, ನಳ್ಳಿ ನೀರಿನ ವ್ಯವಸ್ಥೆ ಇರುವುದಿಲ್ಲ. ಇದೀಗ ಆಳವಾದ ಮರಳುಗಾರಿಕೆಯಿಂದ ಬಾವಿ ನೀರು ಉಪ್ಪು ಮಿಶ್ರಿತವಾಗಿ ನೀರು ಕುಡಿಯಲು ಸಾಧ್ಯವಾಗದೇ ಭವಣೆ ಪಡುವ ಸ್ಥಿತಿ ನಿರ್ಮಾಣವಾಗಿದೆ. ನಳ್ಳಿ ನೀರಿನ ವ್ಯವಸ್ಥೆಯನ್ನು ಕಲ್ಪಸುವಂತೆ ಹಟ್ಟಿಕುದ್ರು ಗ್ರಾಮಸ್ಥರ ಪರವಾಗಿ ಮಾಜಿ ತಾ. ಪಂ. ಸದಸ್ಯ ಹಟ್ಟಿಕುದ್ರು ಬಾಬು ಪೂಜಾರಿಯವರು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಮನಿವಿ ಮಾಡಿದ್ದು, ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ.

    ಅರಣ್ಯ ಇಲಾಖೆ ಭೇಟಿ: ಹಟ್ಟಿಕುದ್ರು ಗ್ರಾಮಸ್ಥರ ಮನವಿ ಮೇರೆಗೆ ಕುಂದಾಪುರ ಉಪ ವಿಭಾಗದ ಅರಣ್ಯ ವಲಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

    Click here

    Click here

    Click here

    Call us

    Call us

    ಹೋರಾಟದ ಎಚ್ಚರಿಕೆ: ಅಕ್ರಮ ಮರಳುಗಾರಿಕೆಯಿಂದ ಜನ ಸಾಮಾನ್ಯರ ನೆಮ್ಮದಿ ಹಾಳಾಗಿದ್ದು, ಬದುಕು ದುಸ್ತರವಾಗಿದೆ. ದನ ಕರು ಹಾಗೂ ಕೋಣಗಳನ್ನು ಮೇಯಿಸಲು ಜಾಗವಿಲ್ಲದೇ ಪರದಾಡ ಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಕೋಂಕಣ ರೈಲ್ವೆ ಹಳಿಯ ಕಂಬಗಳ ಭದ್ರತೆಯ ದೃಷ್ಠಿಯಿಂದ, ಹಟ್ಟಿಕುದ್ರು-ಬಸ್ರೂರಿನ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ಶೀಘ್ರವಾಗಿ ಅಕ್ರಮ ಮರಳುಗಾರಿಕೆಯನ್ನು ಸಂಬಂಧಪಟ್ಟ ಇಲಾಖೆಗಳು ಮಟ್ಟಹಾಕ ಬೇಕು. ತನ್ಮೂಲಕ ಬಸ್ರೂರು-ಹಟ್ಟಿಕುದ್ರು ಜನತೆ ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಾಣವಾಗ ಬೇಕಿದೆ. ಅಕ್ರಮ ಮರಳುಗಾರಿಕೆಯನ್ನು ತಡೆಯುವಲ್ಲಿ ಇಲಾಖೆ ಕಾರ್ಯೋನ್ಮುಖವಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾದಿತು ಎಂದು ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಎಚ್ಚರಿಸಿದ್ದಾರೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d