Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ತಾಲೂಕಿನಲ್ಲಿ 5 ತಿಂಗಳಿನಲ್ಲಿ 6ಕ್ಕೂ ಹೆಚ್ಚು ದೇವಾಲಗಳ ಕಳ್ಳತನ. ಈವರೆಗೂ ಕಳ್ಳರ ಸುಳಿವಿಲ್ಲ
    ವಿಶೇಷ ವರದಿ

    ಕುಂದಾಪುರ ತಾಲೂಕಿನಲ್ಲಿ 5 ತಿಂಗಳಿನಲ್ಲಿ 6ಕ್ಕೂ ಹೆಚ್ಚು ದೇವಾಲಗಳ ಕಳ್ಳತನ. ಈವರೆಗೂ ಕಳ್ಳರ ಸುಳಿವಿಲ್ಲ

    Updated:18/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಕಳೆದ ಜೂನ್ ತಿಂಗಳಿನಿಂದಿಚೆಗೆ ಕುಂದಾಪುರ ತಾಲೂಕಿನಲ್ಲಿ ಆರಕ್ಕೂ ಹೆಚ್ಚು ದೇವಾಲಯಗಳ ಕಳ್ಳತನ ಪ್ರಕರಣ ವರದಿಯಾಗಿದೆ. ಆದರೆ ಈವರೆಗೆ ಕಳ್ಳರು ಮಾತ್ರ ಪತ್ತೆಯಾಗಿಲ್ಲ. ಮಳೆಗಾಲ ಆರಂಭಗೊಳ್ಳುತ್ತಿದ್ದಂತೆಯೇ ಕಳ್ಳತನ ಶುರುವಿಟ್ಟುಕೊಂಡಿದ್ದ ಚೋರರು ಪ್ರಮುಖ ದೇವಾಲಯಗಳನ್ನೇ ಟಾರ್ಗೇಟ್ ಮಾಡಿ ದೇವರ ಆಭರಣ, ಹುಂಡಿಯಲ್ಲಿದ್ದ ದುಡ್ಡು ಹಾಗೂ ಇತರೆ ಸೊತ್ತುಗಳನ್ನು ಎಗರಾಯಿಸಿದ್ದರು. ಹೀಗೆ ಒಂದರ ಹಿಂದೊಂದು ಸರಣಿ ಕಳ್ಳತನ ನಡೆಯುತ್ತಿದ್ದರೂ ಮೌನಕ್ಕೆ ಶರಣಾಗಿರುವ ಪೊಲೀಸ್ ಇಲಾಖೆ ಶೀಘ್ರವೇ ಕಳ್ಳರನ್ನು ಪತ್ತೆಹಚ್ಚಿ ಬಂಧಿಸಬೇಕೆಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

    Click Here

    Call us

    Click Here

    ತಾಲೂಕಿನ ಎಲ್ಲೆಲ್ಲಿ ಕಳ್ಳತನ?

    ಕುಂದಾಪುರ ತಾಲೂಕಿನ ಕಾಲ್ತೋಡು ಮಹಾಲಸಾ ಮಾರಿಕಾಂಬ ದೇವಸ್ಥಾನ, ಕಿರಿಮಂಜೇಶ್ವರದ ಅಗಸ್ತೇಶ್ವರ ದೇವಸ್ಥಾನ, ವಂಡ್ಸೆ ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಹಾಗೂ ಸಮೀಪದ ದೈವಸ್ಥಾನ, ಸೌಕೂರು ದುರ್ಗಾಪರಮೇಶ್ವರಿ ದೇವಸ್ಥಾನ, ತಲ್ಲೂರು ರಕ್ತೇಶ್ವರ ದೇವಸ್ಥಾನ ಸೇರಿದಂತೆ ಉಡುಪಿ ಜಿಲ್ಲೆಯ ಹಲವು ದೇವಸ್ಥಾನದಲ್ಲಿ ಕಳವು ನಡೆದಿತ್ತು. ಲೆಕ್ಕಕ್ಕೆ ಸಿಕ್ಕವು ಇವಿಷ್ಟು ಮಾತ್ರ. ಇನ್ನು ಸಣ್ಣ ದೇವಸ್ಥಾನಗಳಲ್ಲಾದ ಸಣ್ಣ-ಪುಟ್ಟ ಕಳವಿನ ಬಗ್ಗೆ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿಲ್ಲ. ಕಳೆದ ವರ್ಷ ತಾಲೂಕಿನ ಕಟ್ಕೆರೆ ಸಮೀಪದ ಕಾಳಿಕಾಂಬ ದೇವಸ್ಥಾನದಲ್ಲಿ ನಡೆದ ದೊಡ್ಡ ಕಳ್ಳತನದ ಸುಳಿವೂ ಕೂಡ ಈವರೆಗೆ ಪತ್ತೆಯಾಗಿಲ್ಲ. (ಕುಂದಾಪ್ರ ಡಾಟ್ ಕಾಂ ವರದಿ)

    ಇಲಾಖೆ ಏನು ಮಾಡುತ್ತಿದೆ?

    ಮಳೆಗಾಲ ಪ್ರಾರಂಭವಾದ ಕೂಡಲೇ ದೇವಸ್ಥಾನಗಳ ಕಳ್ಳತನ ನಡೆಯುವುದು ಸಾಮಾನ್ಯವಾಗಿಬಿಟ್ಟಿದೆ. ಆದರೆ ತಾಲೂಕಿನಲ್ಲಾದ ದೇವಾಲಯಗಳ ಕಳ್ಳತನದ ಯಾವೊಬ್ಬ ಆರೋಪಿಯನ್ನು ಬಂಧಿಸಲು ನಮ್ಮ ಪೋಲೀಸರು ಯಶಸ್ವಿಯಾಗಿಲ್ಲ ಎನ್ನುವುದು ಬೇಸರದ ಸಂಗತಿ. ಹಾಗಾಗಿ ದಿನೇದಿನೇ ದೇವಸ್ಥಾನಗಳೇ ಕಳ್ಳರ ಟಾರ್ಗೆಟ್ ಆಗುತ್ತಿವೆ. ದೇವಸ್ಥಾನಗಳಲ್ಲಿ ರಾತ್ರಿಯ ಹೊತ್ತು ಕಾವಲು ವ್ಯವಸ್ಥೆ ಇಲ್ಲದಿರುವುದು. ಬಹುತೇಕ ಹೆಚ್ಚಿನ ದೇಗುಲಗಳಲ್ಲಿ ಸಿಸಿ ಕ್ಯಾಮರವನ್ನು ಅಳವಡಿಸಿಲ್ಲದಿರುವುದು. ಜನ ಸಂಚಾರ ಕಡಿಮೆ ಇರುವುದು, ಮಳೆಗಾಲದಲ್ಲಿ ದಿನಗೂಲಿ ಕೆಲಸದ ತೊಂದರೆಯಾಗುವುದು ಕಳ್ಳತನಕ್ಕೆ ವರವಾಗಿ ಪರಿಣಮಿಸಿದೆ. ದೇವಸ್ಥಾನಗಳಲ್ಲಿ ಚಿನ್ನ-ಬೆಳ್ಳಿ, ನಗದುಗಳನ್ನು ಜಾಗರೂಕತೆಯಿಂದ ಇಟ್ಟುಕೊಳ್ಳ ಬೇಕಾದುದು ಸಂಬಂಧಪಟ್ಟವರ ಜವಾಬ್ದಾರಿ. ಸೂಕ್ತ ಭದ್ರತೆ ಹಾಗೂ ಸಿಸಿ ಕ್ಯಾಮರಾವನ್ನು ಅಳವಡಿಸಿಕೊಳ್ಳಿ ಎಂದು ಪೊಲೀಸರು ಸೂಚನೆ ನೀಡುತ್ತಾರೆ. ಅದು ಸರಿ. ಆದರೆ ಕಳ್ಳರನ್ನು ಹಿಡಿಯುವವರ್ಯಾರು ಎಂಬುದಕ್ಕೆ ಉತ್ತರವಿಲ್ಲ. ಸಾರ್ವಜನಿಕ ದುಡ್ಡು ಹೀಗೆ ಕಳ್ಳರ ಪಾಲಾರದರೇ ಗತಿಏನು ಎಂಬ ಚಿಂತೆ ಎದುರಾಗಿದೆ.  (ಕುಂದಾಪ್ರ ಡಾಟ್ ಕಾಂ ವರದಿ)

    Click here

    Click here

    Click here

    Call us

    Call us

    ಈ ನಡುವೆ ಸಮಾಧಾನಕರ ಸಂಗತಿಯೆಂದರೇ ಜಿಲ್ಲಾ ಪೊಲೀಸ್ ತಂಡ ಮೂವರು ಅಂತರ್ಜಿಲ್ಲಾ ಕಳ್ಳರನ್ನು ಬಂಧಿಸಿ 28,01,370 ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದೆ. ಕಾರ್ಕಳ, ಹಿರಿಯಡಕ, ಶಿರ್ವ, ತಮಕೂರಿನ ಹಲವು ದೇವಾಲಯ ಕಳ್ಳತನ ಪ್ರಕರಣದ ಪ್ರಮುಖ ಆರೋಪಿಗಳಾದ ನರಸಿಂಹ ರಾಜು(37), ಮೊಹಮ್ಮದ್ ಶಬ್ಬೀರ್(20) ಹಾಗೂ ಪೈರೋಜ್ ಪಾಷಾ(22) ಬಂಧಿತರು. ಆದರೆ ಕುಂದಾಪುರ ತಾಲೂಕಿನ ದೇವಸ್ಥಾದ ಸೊತ್ತು ದೋಚಿದವರ ಬಂಧನವೂ ಶೀಘ್ರವೇ ಆಗಬೇಕೆಂಬುದು ಜನತೆಯ ಅಹವಾಲು.

    Like this:

    Like Loading...

    Related

    Kundapura DYSP Kundapura police Police SP Annamalai
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d