Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತಲ್ಲೂರು: ವಿದ್ಯುತ್ ತಗುಲಿ ಇಬ್ಬರು ಯುವಕರ ದುರ್ಮರಣ, ಓರ್ವ ಗಂಭೀರ
    ಅಪಘಾತ-ಅಪರಾಧ ಸುದ್ದಿ

    ತಲ್ಲೂರು: ವಿದ್ಯುತ್ ತಗುಲಿ ಇಬ್ಬರು ಯುವಕರ ದುರ್ಮರಣ, ಓರ್ವ ಗಂಭೀರ

    Updated:01/01/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತಾಲೂಕಿನ ತಲ್ಲೂರು ಪ್ರೌಢಶಾಲೆಯ ಎದುರಿನ ಮೈದಾನದಲ್ಲಿ ಸಮೀಪ ಕಾರ್ಯಕ್ರಮವೊಂದರ ಸಲುವಾಗಿ ಬಂಟಿಂಗ್ಸ್ ಕಟ್ಟುತ್ತಿದ್ದ ವೇಳೆ ಹೈಟೆನ್ಷನ್ ತಂತಿ ತಗಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಮನೋಜ್ ದೇವಾಡಿಗ (31) ಸುನಿಲ್ ಮೊಗವೀರ (24) ಮೃತರು ದುರ್ದೈವಿಗಳು.

    Click Here

    Call us

    Click Here

    ಜನವರಿ 3ರಂದು ನಡೆಯಲಿರುವ ಕಾರ್ಯಕ್ರಮದ ಸಲುವಾಗಿ ಸಿದ್ಧತೆಗಳು ನಡೆಯುತ್ತಿದ್ದು, ಮಧ್ಯರಾತ್ರಿ ವೇಳೆಗೆ ಯುವಕರ ತಂಡ ಬ್ಯಾನರ್, ಬಂಟಿಂಗ್ಸ್ ಕಟ್ಟುವುದರಲ್ಲಿ ನಿರತವಾಗಿತ್ತು. ಒಬ್ಬ ಯುವಕರು ಮೇಲೇರಿ ಬಂಟಿಂಗ್‌ ಕಟ್ಟಲು ಅದನ್ನು ಮೇಲ್ಮುಖವಾಗಿ ಎಸೆದು ತಂತಿಯನ್ನು ಪಾಸ್ ಮಾಡುತ್ತಿದ್ದ ವೇಳೆ ಅದು ಹೈಟೆನ್ಷನ್ ವಿದ್ಯುತ್ ತಂತಿಗೆ ತಾಕಿದೆ. ಅದರ ಇನ್ನೊಂದು ಬದಿಯನ್ನು ಯುವಕ ಕೈಯಲ್ಲಿ ಹಿಡಿದಾಗ ವಿದ್ಯುತ್ ಶಾಕ್ ತಗಲಿದೆ ಎನ್ನಲಾಗಿದೆ. ಆತನನ್ನು ರಕ್ಷಿಸಲು ಹೋದ ಮತ್ತೊಬ್ಬನಿಗೂ ಶಾಕ್ ತಗಲಿ ಇಬ್ಬರೂ ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಹೇಶ ಎಂಬುವವನಿಗೆ ಗಂಭೀರ ಗಾಯಗಳಾಗಿದ್ದರೇ, ಉಳಿದವರು ದೂರದಲ್ಲಿ ಕೆಲಸ ಮಾಡುತ್ತಿದ್ದುದರಿಂದ ಅಪಾಯದಿಂದ ಪಾರಾಗಿದ್ದಾರೆ. (ಕುಂದಾಪ್ರ ಡಾಟ್ ಕಾಂ)

    ಕೋಡಿಯ ತಂಪು ಪಾನೀಯ ತಯಾರಿಕಾ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಮನೋಜ್ ಕುಟುಂಬದ ಆಧಾರ ಸ್ಥಂಭವಾಗಿದ್ದರು. ಭಂಡಾರ್ಕಾರ್ಸ್ ಕಾಲೇಜಿನ ದ್ವಿತೀಯ ಬಿಎ ವಿದ್ಯಾರ್ಥಿಯಾಗಿದ್ದ ಸುನಿಲ್ ಕೂಡ ಬಿಡುವಿನ ವೇಳೆ ಕ್ಯಾಟರಿಂಗ್ ಕೆಲಸಕ್ಕೆ ಹೋಗಿ ತನ್ನ ತಾಯಿಗೆ ನೆರವಾಗುತ್ತಿದ್ದರು. ಮನೋಜ್ ಹಾಗೂ ಸುನಿಲ್ ಇಬ್ಬರು ಆತ್ಮೀಯರು. ಒಂದು ಸ್ವಂತ ಉದ್ಯಮ ಆರಂಭಿಸುವ ಆಲೋಚನೆಯಲ್ಲಿಯೂ ಇದ್ದರು. ಆದರೆ ವಿಧಿಯಾಟ ಬೇರೆಯೇ ಇತ್ತು. ತಲ್ಲೂರು ಪರಿಸರದಲ್ಲಿ ಎಲ್ಲರೊಂದಿಗೂ ಬೆರೆತು, ಸಾಮಾಜಿಕ ಸಂಘಟನೆಗಳಲ್ಲಿಯೂ ಸಕ್ರಿಯವಾಗಿದ್ದ ಮನೋಜ್ ಹಾಗೂ ಸುನಿಲ್ ಅವರ ಸಾವು ಊರವರಿಗೆ ಆಘಾತ ತಂದೊಡ್ಡಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್‌ಪಿ ಮಂಜುನಾಥ ಶೆಟ್ಟಿ, ಸಬ್‌ ಇನ್ಸ್‌ಪೆಕ್ಟರ್ ನಾಸಿರ್ ಹುಸೇನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d