Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪರಿಷತ್ ಕದನ: ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪಚಂದ್ರ ಶೆಟ್ಟರಿಗೆ ಗೆಲುವು
    Recent post

    ಪರಿಷತ್ ಕದನ: ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪಚಂದ್ರ ಶೆಟ್ಟರಿಗೆ ಗೆಲುವು

    Updated:30/12/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ರಾಜ್ಯದ ಇಪ್ಪತ್ತು ಕ್ಷೇತ್ರಗಳಲ್ಲಿನ 25 ವಿಧಾನ ಪರಿಷತ್‌ ಸ್ಥಾನಗಳಿಗೆ ನಡೆದ ಚುನಾವಣೆಯ ಫ‌ಲಿತಾಂಶ ಬಹುಪಾಲು ಹೊರಬಿದ್ದಿದ್ದು ದಕ್ಷಿಣ ಕನ್ನಡ-ಉಡುಪಿ ಕ್ಷೇತ್ರದಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರತಾಪಚಂದ್ರ ಶೆಟ್ಟಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ವರ್ಧಿಸಿದ್ದ ಜಯಪ್ರಕಾಶ್ ಹೆಗ್ಡೆ ಪರಾಭವಗೊಂಡು ತೀವ್ರ ಮುಖಭಂಗ ಅನುಭವಿಸಿದ್ದಾರೆ.

    Click Here

    Call us

    Click Here

    ವಿಧಾನ ಪರಿಷತ್ ಚುನಾವಣೆಯಲ್ಲಿ ಒಟ್ಟು 8 ಮಂದಿ ಸ್ವರ್ಧಿಸಿದ್ದರು. ಚಲಾವಣೆಯಾದ ಒಟ್ಟು 6354 ಮತಗಳ 231 ಮತಗಳು ಅಸಿಂಧುವಾಗಿದ್ದರೇ, 2 ನೋಟಾ ಬಿದ್ದಿದೆ. ಸಿಂಧುವಾದ 6301 ಮತಗಳ ಪೈಕಿ ಕೋಟ ಶ್ರೀನಿವಾಸ ಪೂಜಾರಿ 2977 ಮತಗಳನ್ನು ಪಡೆದ್ದು ಜಯಭೇರಿ ಗಳಿಸಿದ್ದರೇ, ಪ್ರತಾಪಚಂದ್ರ ಶೆಟ್ಟಿ 2237 ಮತಗಳನ್ನು ಪಡೆದು ವಿಜಯದ ನಗೆ ಬೀರಿದ್ದಾರೆ. ಉಳಿದಂತೆ ಕಾಂಗ್ರೆಸ್ ಭಂಡಾಯ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರಿಗೆ 872 ಮತಗಳು, ಹರಿಕೃಷ್ಣ ಬಂಟ್ವಾಳ್ ಗೆ 127 ಮತಗಳು ದೊರೆತಿದ್ದರೇ, ಉಳಿದವರಿಗೆ ಒಟ್ಟು 88 ಮತಗಳು ದೊರೆತಿವೆ. (ಕುಂದಾಪ್ರ ಡಾಟ್ ಕಾಂ)

    ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಮತಗಳು ಬಿಜೆಪಿಗೆ ಬಿದ್ದರೇ ಅನಾಯಾಸವಾಗಿ ಕೋಟ ಶ್ರೀನಿವಾಸ ಪೂಜಾರಿ ಅವರು ಗೆಲ್ಲಬಹುದು ಎನ್ನಲಾಗಿತ್ತು. ನಿರೀಕ್ಷೆಯಂತೆ ಮತಗಳು ಲಭಿಸಿದ್ದು ಸುಲಭವಾಗಿ ಗೆಲುವಿನ ನಗೆ ಬೀರಿದ್ದಾರೆ. ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯದ ಬಿಸಿ ಕಾಣಿಸಿಕೊಂಡಿದ್ದರಿಂದ ಪ್ರತಾಪಚಂದ್ರ ಶೆಟ್ಟಿ ಅವರ ಗೆಲುವು ನಾಯಕರುಗಳಿಗೆ ಪ್ರತಿಷ್ಠೆಯಾಗಿ ಪರಿಣಮಿಸಿತ್ತು. ಈ ಚುನಾವಣೆ ಬಂಡಾಯ ಅಭ್ಯರ್ಥಿಗಳು ಹಾಗೂ ಅವಳಿ ಜಿಲ್ಲೆಗಳ ಶಾಸಕರು, ಮಂತ್ರಿಗಳ ನಡುವಿನ ಹೋರಾಟ ಎಂದು ಬಿಂಬಿಸಲಾಗುತ್ತು. ಕೊನೆಗೂ ಪ್ರತಾಪಚಂದ್ರ ಶೆಟ್ಟಿ ಅವರು ಗೆಲ್ಲುವ ಮೂಲಕ ಕಾಂಗ್ರೆಸ್ ತನ್ನ ಸ್ಥಾನ ಉಳಿಸಿಕೊಂಡಿದೆ. ಒಟ್ಟಿನಲ್ಲಿ ಪ್ರತಾಪಚಂದ್ರ ಶೆಟ್ಟಿ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರು ಮತ್ತೆ ಮೇಲ್ಮನೆ ಪ್ರವೇಶಿಸಿದಂತಾಗಿದೆ. (ಕುಂದಾಪ್ರ ಡಾಟ್ ಕಾಂ)

    ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಫ‌ಲಿತಾಂಶಕ್ಕೆ ರಾಜಕೀಯವಾಗಿ ಅಷ್ಟೇನೂ ಪ್ರಾಮುಖ್ಯ ಇಲ್ಲದಿದ್ದರೂ 75 ಸದಸ್ಯ ಬಲದ ಮೇಲ್ಮನೆಯಲ್ಲಿ ತಮ್ಮ ಸ್ಥಾನದ ಬಲವನ್ನು ಹೆಚ್ಚಿಸಿಕೊಳ್ಳುವ ಅವಕಾಶ ಮೂರು ಪಕ್ಷಗಳಿಗೂ ಈ ಚುನಾವಣೆ ಮೂಲಕ ಲಭ್ಯವಾಗಿತ್ತು. ಒಂದು ವೇಳೆ ಕಾಂಗ್ರೆಸ್‌ ಉತ್ತಮ ಸಾಧನೆ ತೋರಿದರೆ ಮುಂದಿನ ಜೂನ್‌-ಜುಲೈ ವೇಳೆಗೆ ಹಿರಿಯರ ಮನೆಯಲ್ಲಿ ಹಿಡಿತ ಸಾಧಿಸಿ ಕೆಳಮನೆಯಲ್ಲಿ ಒಪ್ಪಿಗೆ ಪಡೆದ ಮಸೂದೆಗಳು ಮೇಲ್ಮನೆಯಲ್ಲಿ ಪಾಸ್ ಆಗುವಂತೆ ಮಾಡಿ ಮುಜುಗರದಿಂದ ತಪ್ಪಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. ಬಿಜೆಪಿಗೆ ತನ್ನ ಸ್ಥಾನವನ್ನು ಬಲಪಡಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. ಜೆಡಿಎಸ್ ಗೆ ಅಳಿವು ಉಳಿವಿನ ಪ್ರಶ್ನೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d