ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬಗ್ವಾಡಿಯ ಸುಬ್ರಹ್ಮಣ್ಯ ಮೊಗವೀರ ಅವರ ಮನೆಗೆ ಬೈಂದೂರಿನ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು.
ಈ ಸಂದರ್ಭ ಅವರು ಮೀನುಗಾರಿಕೆ ಇಲಾಖೆಯಿಂದ ಶೀಘ್ರವಾಗಿ ಮನೆ ನಿರ್ಮಿಸಿಕೊಡುವ ಭರವಸೆ ನೀಡಿ, ಮನೆ ನಿರ್ಮಿಸಲು ಅಗತ್ಯವಿರುವ ಸಲಕರಣೆಗಳನ್ನು ಸ್ಥಳೀಯ ಮುಖಂಡರ ಮೂಲಕ ಒದಗಿಸಿಕೊಡುವುದಾಗಿ ತಿಳಿಸಿದರು. ಕಲಾವಿದನಿಗೆ ಆರ್ಥಿಕ ಸಹಾಯ ಮಾಡಿದರು.
ಈ ಸಂದರ್ಭ ಬಿಜೆಪಿಯ ಪ್ರಮುಖರು ಜೊತೆಗಿದ್ದರು.