ಆಳ್ವಾಸ್‌ನಲ್ಲಿ ‘ಗಾಂಧಿ ಸಾಗರದ ಬಿಂದುಗಳು’ ಕೃತಿ ಅವಲೋಕನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ:
ಸ್ವಾಸ್ಥ್ಯ ಸಮಾಜಕ್ಕೆ ಗಾಂಧಿ ತತ್ವಗಳು ಅವಶ್ಯ ಎಂದು ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಕೃಷ್ಣರಾಜ ಕರಬ ಹೇಳಿದರು.

Click here

Click Here

Call us

Call us

Visit Now

Call us

Call us

ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ನಡೆದ ಸದಾನಂದ ನಾರಾವಿಯವರ ‘ಗಾಂಧಿ ಸಾಗರದ ಬಿಂದುಗಳು’ ಕೃತಿ ಅವಲೋಕನ ಕಾರ್ಯಕ್ರಮದಲ್ಲಿ ಕೃತಿಯನ್ನು ವಿಮರ್ಶಿಸಿ ಮಾತನಾಡಿದ ಅವರು, ಸಮಾಜದಲ್ಲಿ ಶೋಷಣೆಗೆ ಒಳಾಗಾದ ಪಂಗಡ ಮತ್ತು ಗ್ರಾಮೀಣ ಜನರ ನೋವಿಗೆ ಸ್ಪಂದಿಸುವ ಗುಣ ಬೆಳಸಿಕೊಂಡರೆ, ಜಗತ್ತಿನ ಕಷ್ಟಗಳಿಗೆ ಸ್ಪಂದಿಸುವ ಸಾಮರ್ಥ್ಯ ಬೆಳೆಯುತ್ತದೆ. ಜಾತಿ ಲೆಕ್ಕಾಚಾರ ಇರದೇ ಸರ್ವ ಧರ್ಮ ಸಹಿಷ್ಣು ಭಾವನೆ ಎಲ್ಲರಲ್ಲೂ ಇರಬೇಕು, ಗಾಂಧೀಜಿಯು ಎಲ್ಲ ಧರ್ಮವನ್ನು ಗೌರವಿಸುವವರು, ಗಾಂಧಿ ತತ್ವಗಳಿಂದ ಸಮಾಜದ ಸ್ವಾಸ್ಥ್ಯತೆ ಹೆಚ್ಚುತ್ತದೆ. ಇಂತಹ ಕೃತಿಗಳನ್ನು ಪಠ್ಯ ಪುಸ್ತಕಕ್ಕೆ ಸೇರಿಸಿದರೆ ವಿದ್ಯಾರ್ಥಿಗಳಲ್ಲಿ ರಾಷ್ಟ್ರ ನಿರ್ಮಾಣದ ಚಿಂತನೆಗಳು ಬೆಳೆಯುತ್ತದೆ ಎಂದು ಹೇಳಿದರು.

ಇದೇ ಸಂರ್ದಭದಲ್ಲಿ ‘ಗಾಂಧಿ ಸಾಗರದ ಬಿಂದುಗಳು’ ಪುಸ್ತಕದ ಲೇಖಕರಾದ ಸದಾನಂದ ನಾರವಿ, ಬದುಕಿನಲ್ಲಿ ಮೌಲ್ಯಗಳು ಬಹಳ ಮುಖ್ಯ ಹಾಗೂ ಅವುಗಳು ಮನುಷ್ಯನ ಜೀವನದಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತದೆ. ಮೌಲ್ಯಗಳಿಲ್ಲದ ಮತ್ತು ವಿದ್ಯೆಯಿಲ್ಲದ ಮನುಷ್ಯರಿಗೆ, ಬೆಲೆ ಇರುವುದಿಲ್ಲ. ಕೆಲವೊಮ್ಮೆ ವಿದ್ಯೆ ಇರುವವನಿಗೆ ಹೆದರಿಕೆಯಿಂದಲೂ ಗೌರವ ಕೊಡುತ್ತಾರೆ, ಅದೇ ಮೌಲ್ಯಗಳಿರುವ ಮನುಷ್ಯರಿಗೆ ಅವರ ಆದರ್ಶಗಳೇ ಗೌರವ ತಂದು ಕೊಡುತ್ತದೆ. ಮಾನವೀಯ ಮೌಲ್ಯಗಳ ಚಿಂತನೆಗಳು ನಶಿಸಿ ಹೋಗದಂತೆ ನೋಡಿಕೊಂಡು ಮುಂದಿನ ಪೀಳಿಗೆಗೆ ತಲುಪುವಂತೆ ಮಾಡಬೇಕು ಎಂದು ತಮ್ಮ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕನ್ನಡ ವಿಭಾಗ ಮುಖ್ಯಸ್ಥ ಡಾ. ಯೋಗಿಶ್ ಕೈರೋಡಿ, ಉಪನ್ಯಾಸಕ ಹರೀಶ್ ಟಿ ಜಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಉಮಾಶ್ರೀ ವಂದಿಸಿದರು, ಉಪನ್ಯಾಸಕಿ ಡಾ. ಜ್ಯೋತಿ ರೈ ನಿರೂಪಿಸಿದರು.

Leave a Reply

Your email address will not be published. Required fields are marked *

4 × two =