ಕಾಳಾವರ: ಕಾರು – ದ್ವಿಚಕ್ರ ವಾಹನ ಡಿಕ್ಕಿ. ದ್ವಿಚಕ್ರ ವಾಹನ ಸವಾರನ ಸಾವು

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಕಾಳಾವರದ ರಸ್ತೆಯಲ್ಲಿ ಸಾಗುತ್ತಿದ್ದ ಬೊಲೆನೋ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ದ್ವಿಚಕ್ರ ವಾಹನ ಸವಾರ, ಕಾಳವಾರದ ನಿವಾಸಿ ನರಸಿಂಹ ಶೆಟ್ಟಿ (75) ಮೃತ ದುರ್ದೈವಿ.

Call us

Click Here

Click here

Click Here

Call us

Visit Now

Click here

ಭಾನುವಾರ ಸಂಜೆ ವೇಳೆಗೆ ಕೋಟೇಶ್ವರ ಕಡೆಯಿಂದ ಹಾಲಾಡಿ ಮಾರ್ಗವಾಗಿ ತೆರಳುತ್ತಿದ್ದ ಬೊಲೆನೋ ಕಾರಿಗೆ ಶಾಲೆ ಸಮೀಪದ ಅಡ್ಡ ರಸ್ತೆಯಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರು ಚಾಲಕ ಹಠಾತ್ತನೇ ಬ್ರೇಕ್ ಹಾಕಿದ್ದರಿಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲು ಕಂಬವನ್ನು ತುಂಡರಿಸಿ ಮುಂದೆ ಸಾಗಿ ದೇವಸ್ಥಾನದ ಕಂಬವೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ.

ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ನರಸಿಂಹ ಶೆಟ್ಟಿ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರಾದರೂ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

5 × 1 =