ಕುಂದಾಪುರ: ಇಲ್ಲಿನ ನೂತನ ಉಪವಿಭಾಗಾಧಿಕಾರಿಯಾಗಿ ಅಶ್ವಥಿ ಎಸ್. ನಗರದ ಮಿನಿ ವಿಧಾನಸೌಧದ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಕುಂದಾಪುರ ದಿಂದ ಬೇರೆ ಕಡೆ ವರ್ಗಾವಣೆಗೊಂಡ ಅಸಿಸ್ಟೆಂಟ್ ಕಮೀಷನರ್ ಚಾರುಲತಾ ಸೋಮಲ್ ಅವರ ಅಶ್ವಥಿ ಅವರಿಗೆ ಅಧಿಕಾರ ಹಸ್ತಾಂತರಿಸಿರು. ಕುಂದಾಪುರ ತಹಸೀಲ್ದಾರ್ ಗಾಯತ್ರಿ ಎನ್.ನಾಯ್ಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕೇರಳ ಮೂಲದ ಅಶ್ವಥಿ ಎಸ್. ಅವರು ಹಿಂದೆ ಮೈಸೂರು ನಂತರ ದೆಹಲಿಯಲ್ಲಿ ಕೆಲಸ ನಿರ್ವಹಿಸಿ ಕುಂದಾಪುರ ಎಸಿಯಾಗಿ ನಿಯುಕ್ತಿಗೊಂಡಿದ್ದರೆ.