ಕುಂದಾಪುರ – ಬೈಂದೂರು: ಭಕ್ತಿ ಭಾವದಿಂದ ನಾಗರ ಪಂಚಮಿ ಆಚರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರಾವಳಿಯ ಬಹುದೊಡ್ಡ ಹಬ್ಬವಾದ ನಾಗರಪಂಚಮಿಯನ್ನು ಕುಂದಾಪುರ ತಾಲೂಕಿನೆಲ್ಲೆಡೆ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆನಿಂದಲೇ ನಾಗಬನ, ಹಾಗೂ ತಾಲೂಕಿನ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳು ನಾಗನಿಗೆ ಹಾಲು, ಏಳನೀರು, ಕೇದಿಗೆ ಹೂವನ್ನು ಸಮರ್ಪಿಸಿ ಪುನೀತರಾದರು.

Click Here

Call us

Call us

ತಾಲೂಕಿನ ಪ್ರಸಿದ್ಧ ದೇವಾಲಯವಾದ ಗುಡ್ಡಮ್ಮಾಡಿ, ಕಾಳಾವರ, ಉಳ್ಳೂರು ಕಾರ್ತಿಕೇಯ ದೇವಸ್ಥಾನ ಸೇರಿದಂತೆ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜಾವಿಧಿಗಳು ನೆರವೇರಿದರು. ಸೇನಾಪುರ ಗ್ರಾಮದ ಗುಡ್ಡಾಮ್ಮಾಡಿಯಲ್ಲಿ ಹಾಲುಹಿಟ್ಟು ಸೇವೆ, ಅಭಿಷೇಕ ಹಾಗೂ ವಿಶೇಷ ಪೂಜೆ ನಡೆಯಿತು. ಭಟ್ಕಳ, ಬೈಂದೂರು, ಕುಂದಾಪುರದಿಂದ ನೂರಾರು ಭಕ್ತಾದಿಗಳು ಆಗಮಿಸಿ ದೇವರ ಕೃಪೆಗೆ ಪಾತ್ರರಾದರು. ಭಕ್ತಾದಿಗಳಿಗೆ ನೈವೇದ್ಯದ ಪ್ರಸಾದ ವಿತರಣೆ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಕುಂದಾಪ್ರ ಡಾಟ್ ಕಾಂ.

Click here

Click Here

Call us

Visit Now

ಬೈಂದೂರಿನ ಸೋಮೇಶ್ವರದಲ್ಲಿನ ದೇವಸ್ಥಾನದಲ್ಲಿನ ನಾಗಬನ, ಕುಂದಾಪುರದ ಭಟ್ರಹಾಡಿಯ ನಾಗಬನ, ರೋಯಲ್ ಸಭಾಭವನದ ಬಳಿಯ ನಾಗಬನ ಸೇರಿದಂತೆ ಎಲ್ಲಾ ನಾಗಬನದಲ್ಲಿಯೂ ನಾಗನಿಗೆ ವಿಶೇಷಪೂಜೆ ಸಲ್ಲಿಸಲಾಯಿತು.

 Nagara panchami in kundapura byndoor_2 Nagara panchami in kundapura byndoor_3 Nagara panchami in kundapura byndoor_4Nagara panchami in kundapura byndoor_1

Leave a Reply

Your email address will not be published. Required fields are marked *

seventeen + six =