ಕುಂದಾಪುರ ಮುಖ್ಯ ರಸ್ತೆಗೆ ಡಾ. ಬಿ. ಆರ್. ಅಂಬೇಡ್ಕರ್ ಹೆಸರಿಡಿ: ದ.ಸಂ.ಸ. ಆಗ್ರಹ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪೇಟೆಯ ಮುಖ್ಯ ರಸ್ತೆಗೆ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕುಂದಾಪುರ ತಾಲೂಕು ಸಮಿತಿ ವತಿಯಿಂದ ಕುಂದಾಪುರ ಪುರಸಭಾ ಅದ್ಯಕ್ಷರಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಗಿದೆ.

Click Here

Call us

Call us

ಕುಂದಾಪುರದ ಮಿನಿ ವಿಧಾನ ಸೌಧದ ಮುಂಬಾಗದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆನ್ನುವ ಬೇಡಿಕೆಯನ್ನು ಹಲವಾರು ಬಾರಿ ಈ ಹಿಂದೆ ಸಲ್ಲಿಸಲಾಗಿತ್ತು ಇದೀಗ ಕುಂದಾಪುರ ಪೇಟೆಯ ಮುಖ್ಯ ರಸ್ತೆಗೆ ಗಣ್ಯರ ಹೆಸರಿಡುವ ಪ್ರಸ್ತಾವನೆ ಪುರಸಭೆಯ ಮುಂದಿದ್ದು ತಾಲೂಕಿನಲ್ಲಿರುವ ಅಂಬೇಡ್ಕರ್ ಭವನವೊಂದು ಬಿಟ್ಟರೆ ಬೇರೆ ಯಾವುದೇ ಒಂದು ಸರಕಾರಿ ಸಂಸ್ಥೆಗಾಗಲಿ ರಸ್ತೆಗಾಗಲಿ ಈತನಕ ಅಂಬೇಡ್ಕರ್ ಹೆಸರಿಟ್ಟಿರುವ ಉದಾಹರಣೆಗಳೇ ಇಲ್ಲ ಆದ್ದರಿಂದ ಕುಂದಾಪುರ ಪೇಟೆಯ ಮುಖ್ಯ ರಸ್ತೆಗೆ ಸಂವಿಧಾನ ಶಿಲ್ಪಿ ಯ ಹೆಸರಿಡುವಂತೆ ಅಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಆಗ್ರಹಿಸಲಾಗಿದೆ ಅಂಬೇಡ್ಕರ್ ಹೆಸರನ್ನು ಕಡೆಗಣಿಸಿ ಬೇರಾವುದೇ ಹೆಸರಿಡಲು ಮುಂದಾದಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲೆ ಸಂಘಟನಾ ಸಂಚಾಲಕರಾದ ಮಂಜುನಾಥ ಗಿಳಿಯಾರು,ವಾಸುದೇವ ಮುದೂರು, ಕುಂದಾಪುರ ತಾಲೂಕು ಸಂಚಾಲಕ ರಾಜು ಬೆಟ್ಟಿನ ಮನೆ,ಮುಖಂಡರಾದ ರವಿಂದ್ರ ಸುಣ್ಣಾರಿ,ಸುರೇಶ್ ಹಕ್ಲಾಡಿ,ತಾಲೂಕು ಮಹಿಳಾ ಒಕ್ಕೂಟದ ಸಂಚಾಲಕಿ ಗೀತಾ ಸುರೇಶ್ ಕುಮಾರ್, ಬೈಂದೂರು ತಾಲೂಕು ಸಂಚಾಲಕ ಮಂಜುನಾಥ ನಾಗೂರು ಜಂಟಿ ಪತ್ರಿಕ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

Click here

Click Here

Call us

Visit Now

Leave a Reply

Your email address will not be published. Required fields are marked *

1 × 4 =