ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಪ್ರಧಾನ ಅಂಚೆ ಕಛೇರಿಯಲ್ಲಿ ವಿಶ್ವ ಅಂಚೆ ದಿನಾಚರಣೆಯನ್ನು ಆಚರಿಸಲಾಯಿತು. ಅಂಚೆ ಇಲಾಖೆಯ 167 ವರ್ಷಾಚರಣೆಯನ್ನು ಅಕ್ಟೋಬರ್ 9ರಿಂದ 15ರವರೆಗೆ ‘ಅಂಚೆ ಸಪ್ತಾಹ’ದ ಮೂಲಕ ಆಚರಿಸಲಾಗುತ್ತಿದೆ.
ಈ ಸಂದರ್ಭ ಅಂಚೆ ಉಪ ಅಧೀಕ್ಷಕರಾದ ಪಿ ಏನ್ ಸತೀಶ, ಅಂಚೆ ನಿರೀಕ್ಷಿಕರಾದ ಡಿ ಎಮ್ ರಾಮಚಂದ್ರ, ಅಂಚೆಪಾಲಕರಾದ ಮಂಜುನಾಥ್ ಎಚ್ ಹಾಗೂ ಅಂಚೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
