ಕೆನರಾ ಬ್ಯಾಂಕ್ ಸಂಸ್ಥಾಪಕರ ಜನ್ಮದಿನಾಚರಣೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಜನರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ದೃಷ್ಟಿಯಿಂದ ಅಮ್ಮೆಂಬಲ ಸುಬ್ಬರಾವ್ ಪೈ ಅವರು 1906ರಲ್ಲಿ ಕೆನರಾ ಬ್ಯಾಂಕ್‌ನ್ನು ಸ್ಥಾಪನೆ ಮಾಡಿ ಲಕ್ಷಾಂತರ ಕುಟುಂಬಗಳಿಗೆ ನೆರವಾದರು. ಸೇವೆಗೆ ಹೆಚ್ಚು ಪ್ರಾಮುಖ್ಯತೆ ನೀಡಿದ ಕೆನರಾ ಬ್ಯಾಂಕ್ ಇಂದು ದೇಶದಲ್ಲಿ ೩ನೇ ಅತಿ ದೊಡ್ಡ ಬ್ಯಾಂಕ್ ಆಗಿ ಬೆಳೆದು ನಿಂತಿದೆ. ಬ್ಯಾಂಕುಗಳು ಕೇವಲ ಹಣಕಾಸಿನ ಹೃದಯ ಮಾತ್ರವಲ್ಲದೇ, ಮಾನವೀಯ ಹೃದಯದಿಂದಲೂ ಕಾರ್ಯನಿರ್ವಹಿಸಿ, ಜನಸಾಮಾನ್ಯರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಶ್ರಮಿಸಬೇಕೆಂದು ಹೇಳುತ್ತಿದ್ದ ಕೆನರಾ ಬ್ಯಾಂಕಿನ ಸಂಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಅವರು ಬಡವರಿಗಾಗಿ ಬ್ಯಾಂಕ್ ತೆರೆದ ಕರ್ಮಯೋಗಿ ಎಂದು ಗಂಗೊಳ್ಳಿಯ ಉದ್ಯಮಿ ಎಚ್.ಗಣೇಶ ಕಾಮತ್ ಹೇಳಿದರು.

Call us

Click Here

Click here

Click Here

Call us

Visit Now

Click here

ಕೆನರಾ ಬ್ಯಾಂಕ್‌ನ ಸಂಸ್ಥಾಪಕ ಅಮ್ಮೆಂಬಳ ಸುಬ್ಬ ರಾವ್ ಪೈ ಅವರ ಜನ್ಮ ದಿನಾಚರಣೆ ಅಂಗವಾಗಿ ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಅಮ್ಮೆಂಬಳ ಸುಬ್ಬರಾವ್ ಪೈ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖಾ ಪ್ರಬಂಧಕ ವಿಷ್ಣುಮೂರ್ತಿ, ಗಂಗೊಳ್ಳಿಯ ಉದ್ಯಮಿ ಎಂ.ಜಿ.ಅಜಿತ್ ನಾಯಕ್, ಪತ್ರಕರ್ತ ಬಿ.ರಾಘವೇಂದ್ರ ಪೈ, ಉದ್ಯಮಿ ಮಹೇಶ ಗಾಣಿಗ, ಜಿ.ಎಂ.ಹಸೈನಾರ್ ಶುಭ ಹಾರೈಸಿದರು. ಬ್ಯಾಂಕಿನ ಸಿಬ್ಬಂದಿಗಳಾದ ರೇಶ್ಮಾ, ಡಿ.ಶಶಿಕಾಂತ್, ವಿಕ್ರಮ್, ಜಾರ್ಜ್ ಫೆರ್ನಾಂಡಿಸ್, ರಾಜೇಂದ್ರ ಬಿ.ಟಿ., ಶಾಂತಿ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

19 − eighteen =