ಕೋಟೇಶ್ವರ: 3.76 ಲಕ್ಷ ಮೌಲ್ಯದ ಪಡಿತರ ಅಕ್ರಮ ದಾಸ್ತಾನು ವಶಕ್ಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಕೋಟೇಶ್ವರದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ದಾಸ್ತಾನು ಮಾಡಿಟ್ಟಿದ್ದ ಪಡಿತರ ಅಕ್ಕಿಯನ್ನು ಆಹಾರ ನಿರೀಕ್ಷಕರು ಹಾಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Click Here

Call us

Call us

ಮಾಹಿತಿ ಆಧರಿಸಿ ಕೋಟೇಶ್ವರ ಗ್ರಾಮದ ಹಾಲಾಡಿ ರಸ್ತೆಯಲ್ಲಿರುವ ನಂದಿ ಹೋಟೆಲ್‍ನ ಹಿಂಭಾಗದಲ್ಲಿ ಉದಯ್ ಕುಮಾರ್ ಶೆಟ್ಟಿ ಎಂಬುವವರಿಗೆ ಸೇರಿದ್ದ ಶೆಡ್‍ನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ ಪಡಿತರ ಅಕ್ಕಿಯನ್ನು ಸಾಗಾಟ ಮಾಡಲು ಯತ್ನಿಸಲಾಗುತ್ತಿತ್ತು. ಈ ವೇಳೆ ಕುಂದಾಪುರ ಠಾಣಾಧಿಕಾರಿ ಸದಾಶಿವ ಗವರೋಜಿ ಮತ್ತು ಕುಂದಾಪುರ ಆಹಾರ ನಿರೀಕ್ಷಕ ಸುರೇಶ್ ಹಾಗೂ ಸಿಬ್ಬಂದಿಗಳು ದಾಳಿ ಮಾಡಿ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

Click here

Click Here

Call us

Visit Now

ಕೋಟೇಶ್ವರ ನಿವಾಸಿ ಉದಯ್ ಕುಮಾರ್ ಶೆಟ್ಟಿ, ಮಂಗಳೂರು ನಿವಾಸಿ ಆಜಾಮ್, ಉಡುಪಿ ನಿವಾಸಿ ರಮಾ ಪೂಜಾರಿ ಆರೋಪಿಗಳೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಆರೋಪಿಗಳು ತಲೆ ಮರೆಸಿಕೊಂಡಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ದಾಳಿ ವೇಳೆ ರೂ. 3,76,800 ಮೌಲ್ಯದ 25,120 ಕೆಜಿ ಪಡಿತರ ಅಕ್ಕಿ, 2 ಲಕ್ಷ ರೂ ಮೌಲ್ಯದ ಅಶೋಕ್ ಲೈಲ್ಯಾಡ್ ಗೂಡ್ಸ್ ಗಾಡಿ, 4 ಲಕ್ಷ ರೂ ಮೌಲ್ಯದ ಟಾಟಾ ಲಾರಿ, 2,000 ರೂ. ಮೌಲ್ಯದ ಹೊಲಿಗೆ ಯಂತ್ರ ಹಾಗೂ 3,000 ರೂ. ಮೌಲ್ಯದ ತೂಕ ಯಂತ್ರವನ್ನು ವಶಕ್ಕೆ ಪಡೆಯಲಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Call us

Leave a Reply

Your email address will not be published. Required fields are marked *

three × four =