ಗಂಗೊಳ್ಳಿ: ಶಾಸಕ ಗೋಪಾಲ ಪೂಜಾರಿಗೆ ಅಭಿನಂದನೆ

Call us

Call us

Call us

Call us

ಗಂಗೊಳ್ಳಿ : ವಿದ್ಯಾ ಸಂಸ್ಥೆಗಳು ಒಂದು ಊರಿನ ಪ್ರಗತಿಯ ಸಂಕೇತ.ಅವುಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಸಹಕರಿಸಲು ಪ್ರತೀ ನಾಗರಿಕರು ಪ್ರಯತ್ನಿಸಬೇಕು ಎಂದು ಬೈಂದೂರು ಕ್ಷೇತ್ರದ ಶಾಸಕ ಕೆ.ಗೋಪಾಲ ಪೂಜಾರಿ ಅವರು ಅಭಿಪ್ರಾಯಪಟ್ಟರು.

Call us

Click Here

Click here

Click Here

Call us

Visit Now

Click here

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಶಾಸಕರ ಅನುದಾನ ನಿಧಿಬಳಕೆಯೊಂದಿಗೆ 3.5ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆಸಿದ ಇಂಟರ್‌ಲಾಕ್ ಆಳವಡಿಕೆಯ ಕಾಮಗಾರಿ ಪೂರ್ಣಗೊಂಡ ಪ್ರಯುಕ್ತ ಸಂಬಂಧಿತರನ್ನು ಅಭಿನಂದಿಸುವ ಸಲುವಾಗಿ ಅಲ್ಲಿನ ಆಡಳಿತ ಮಂಡಳಿ ಹಮ್ಮಿಕೊಂಡಿದ್ದ ಅಭಿನಂದನಾ ಕಾರ‍್ಯಕ್ರಮದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.

ಇಧೇ ಸಂಧರ್ಭದಲ್ಲಿ ಕಾಮಗಾರಿಗೆ ಸಹಕರಿಸಿದ ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾದ ರಾಜು ದೇವಾಡಿಗ ಅವರನ್ನು ಕೂಡ ಅಭಿನಂದಿಸಿ ಸನ್ಮಾನಿಸಲಾಯಿತು. ಜಿ.ಎಸ್.ವಿ.ಎಸ್ ಅಸೋಷಿಯೇಶನ್ನಿನ ಕಾರ‍್ಯದರ್ಶಿ ಹೆಚ್.ಗಣೇಶ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಸರಸ್ವತಿ ವಿದ್ಯಾಲಯದ ಮಾಜಿ ಪ್ರಾಂಶುಪಾಲ ಆರ್ ಎನ್ ರೇವಣ್‌ಕರ್, ಕನ್ನಡ ಮಾಧ್ಯಮ ಫ್ರೌಢಶಾಲೆಯ ಉಪ ಪ್ರಾಂಶುಪಲ ವಾಮನದಾಸ ಭಟ್, ಆಂಗ್ಲ ಮಾಧ್ಯಮ ಫ್ರೌಢ ಶಾಲೆಯ ಮುಖ್ಯೋಪಧ್ಯಾಯ ರಾಘವೇಂದ್ರ ಶೇರುಗಾರ್,ಗ್ರಾಮ ಪಂಚಾಯತ್ ಸದಸ್ಯ ದುರ್ಗಾರಾಜ್ ಉಪಸ್ಥಿತರಿದ್ದರು.

ಸರಸ್ವತಿ ವಿದ್ಯಾಲಯ ಶಾಲೆಗಳ ಕಾರ‍್ಯದರ್ಶಿ ಎನ್ ಸದಾಶಿವ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಧನ್ಯವಾದ ಅರ್ಪಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ‍್ಯಕ್ರಮ ನಿರೂಪಿಸಿದರು.

ವರದಿ: ನರೇಂದ್ರ ಎಸ್ ಗಂಗೊಳ್ಳಿ.

Call us

Leave a Reply

Your email address will not be published. Required fields are marked *

17 − 9 =