ಗಂಗೊಳ್ಳಿ ನೂತನ ಮೀನು ಮಾರುಕಟ್ಟೆಗೆ ಶಿಲಾನ್ಯಾಸ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು ೨೫ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಮೀನು ಮಾರುಕಟ್ಟೆ ಕಟ್ಟಡಕ್ಕೆ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಹಿರಿಯಣ್ಣ ಶಿಲಾನ್ಯಾಸ ನೆರವೇರಿಸಿದರು.

Click Here

Call us

Call us

ಬಳಿಕ ಮಾತನಾಡಿದ ಅವರು, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮಂಜೂರಾದ ಸುಮಾರು 2ಕೋಟಿ ರೂ.ಗಳನ್ನು 20 ಪ್ರದೇಶಗಳಲ್ಲಿ ಮೀನು ಮಾರುಕಟ್ಟೆ ನಿರ್ಮಿಸಲು ಖರ್ಚು ಮಾಡಲಾಗಿದೆ. ಮೀನುಗಾರಿಕೆಗೆ ಪ್ರಸಿದ್ಧವಾಗಿರುವ ಗಂಗೊಳ್ಳಿಯಲ್ಲಿ ಸುಸಜ್ಜಿತ ಮೀನು ಮಾರುಕಟ್ಟೆ ಇಲ್ಲದಿರುವುದರಿಂದ ಗಂಗೊಳ್ಳಿಯಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಸುಸಜ್ಜಿತವಾದ ಮೀನು ಮಾರುಕಟ್ಟೆ ಕಟ್ಟಡ ನಿರ್ಮಿಸಿ ಮೀನುಗಾರರಿಗೆ ಮೀನು ಮಾರಾಟ ಮಾಡಲು ಅನುಕೂಲ ಮಾಡಿಕೊಡಲಾಗುವುದು ಎಂದು ಅವರು ಹೇಳಿದರು.

Click here

Click Here

Call us

Visit Now

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮಾ ಆರ್.ಖಾರ್ವಿ, ತಾಲೂಕು ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಕೆ.ಶೆಟ್ಟಿ, ನಿಗಮದ ಜನರಲ್ ಮ್ಯಾನೇಜರ್ ಮುದ್ದಣ್ಣ, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರು, ಗ್ರಾಪಂ ಮಾಜಿ ಸದಸ್ಯ ದುರ್ಗರಾಜ್ ಪೂಜಾರಿ, ಉದ್ಯಮಿ ವಾಸುದೇವ ಶೇರುಗಾರ್, ಗುತ್ತಿಗೆದಾರ ಡಿ.ಕೆ.ಕುಲಕರ್ಣಿ ಮೊದಲಾದವರು ಉಪಸ್ಥಿತರಿದ್ದರು. ಪುರೋಹಿತರಾದ ವೇದಮೂರ್ತಿ ಜಿ.ಲಕ್ಷ್ಮೀನಾರಾಯಣ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.

Leave a Reply

Your email address will not be published. Required fields are marked *

three × 5 =