ಗ್ರಹೋಪಯೋಗಿ ವಸ್ತುಗಳ ವಿತರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಬೈಂದೂರು ತಾಲೂಕು ಕೊಲ್ಲೂರು ವಲಯದ ದುಡ್ಡಿನಗುಳಿ ಒಕ್ಕೂಟದಲ್ಲಿ ವಿವಿಧ ಗ್ರಹೋಪಯೋಗಿ ವಸ್ತುಗಳ ವಿತರಣಾ ಕಾರ್ಯಕ್ರಮ ಜರುಗಿತು.

Click Here

Call us

Call us

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಆನಂದ್ ಕೆ. ವಹಿಸಿದ್ದರು. ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಶಂಕರ್ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ. ಅವರು ಸದಸ್ಯರಿಗೆ ಸೋಲಾರ್, ಕುಕ್ ಸ್ಟೌವ್, ಫ್ರಿಡ್ಜ್, ಗ್ರ್ಯಾಂಡರ್ ಟೈಲರಿಂಗ್ ಮಿಷನ್, ಗೋದ್ರೇಜ್, ಟಿವಿ, ಫ್ಯಾನ್, ಮಿಕ್ಸಿ, ಇನ್ನಿತರ ಗ್ರಹ ಉಪಯೋಗಿ ವಸ್ತುಗಳನ್ನು ವಿತರಿಸಿದರು.

Click here

Click Here

Call us

Visit Now

ವಲಯ ಒಕ್ಕೂಟದ ಅಧ್ಯಕ್ಷರಾದ ಮಂಜುನಾಥ್, ಜನಜಾಗೃತಿ ಸದಸ್ಯರಾದ ಮಹಾಬಲ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯರಾದ ಸವಿತಾ, ಅಂಗನವಾಡಿ ಶಿಕ್ಷಕಿ ಶಾರದಾ, ಮೆಕ್ಕೆ ಒಕ್ಕೂಟದ ಅಧ್ಯಕ್ಷ ಎಂ. ಜೆ. ಬೇಬಿ, ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ನಾಯ್ಕ್, ಶಾಲಾ ಎಸ್. ಡಿ. ಎಂ. ಸಿ ಉಪಾಧ್ಯಕ್ಷೆ ಜ್ಯೋತಿ, ತಾಲೂಕು ಜ್ಞಾನವಿಕಾಸ ಸಮನ್ವಯ ಅಧಿಕಾರಿ ಗೀತಾ, ತಾಲೂಕು ಕೃಷಿ ಅಧಿಕಾರಿ ಮಂಜುನಾಥ್, ವಲಯದ ಮೇಲ್ವಿಚಾರಕ ರವಿಶಂಕರ್ ಉಪಸ್ಥಿತರಿದ್ದರು.

ದುಡ್ಡಿನಗುಳಿ ಒಕ್ಕೂಟದ ಸದಸ್ಯರು ಹಾಗೂ ಪ್ರೇರಣಾ ಜ್ಞಾನವಿಕಾಸ ಕೇಂದ್ರದ ಸದಸ್ಯರು ಕಾರ್ಯಕ್ರಮಕ್ಕೇ ಸಾಕ್ಷಿಯಾದರು. ಸೇವಾಪ್ರತಿನಿಧಿ ರಾಮ ಶೆಟ್ಟಿ ಅತ್ತಿಕಾರ್ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿ, ಮೇಲ್ವಿಚಾರಕ ರವಿಶಂಕರ್ ವಂದಿಸಿದರು. ಸಮನ್ವಯ ಅಧಿಕಾರಿ ಗೀತಾ ಕಾರ್ಯಕ್ರಮ ನಿರೂಪಿಸಿದರು.

Call us

Leave a Reply

Your email address will not be published. Required fields are marked *

9 − one =