ಗ್ರೌಂಡ್ ರೈಡರ್ಸ್ ಟ್ರೋಫಿ ಗಂಗೊಳ್ಳಿ: ಸಾಧಕರಿಗೆ ಸನ್ಮಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗ್ರೌಂಡ್ ರೈಡರ್ಸ್ ಗಂಗೊಳ್ಳಿ ಆಶ್ರಯದಲ್ಲಿ ಇಲ್ಲಿನ ಸ.ವಿ.ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ಬೈಂದೂರು ವಲಯ ಮಟ್ಟದ ಲೀಗ್ ಮಾದರಿಯ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ನಡೆಯಿತು.

Click Here

Call us

Call us

ತಾಲೂಕು ಗಾಣಿಗ ಸಂಘದ ಉಪಾಧ್ಯಕ್ಷ ಪ್ರಮೋದ ಗಾಣಿಗ ಪಂದ್ಯಾಟವನ್ನು ಉದ್ಘಾಟಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯ ಸುರೇಂದ್ರ ಖಾರ್ವಿ, ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಹರೀಶ ಖಾರ್ವಿ, ಗ್ರಾಪಂ ಸದಸ್ಯೆ ಶಾಂತಿ ಖಾರ್ವಿ, ಸತೀಶ್ ಜಿ., ಗೋಪಾಲ ಚಂದನ ಮತ್ತಿತರರು ಉಪಸ್ಥಿತರಿದ್ದರು.

Click here

Click Here

Call us

Visit Now

ಗಂಗೊಳ್ಳಿಯ ವಿಶ್ವಾಸ ಗಂಗೊಳ್ಳಿ ತಂಡ ಎವರ್‌ಗ್ರೀನ್ ವಿಶ್ವಸಾಗರ ಗಂಗೊಳ್ಳಿ ತಂಡವನ್ನು ಸೋಲಿಸಿ ಗ್ರೌಂಡ್ ರೈಡರ್ಸ್ ಟ್ರೋಫಿ – 2021ನ್ನು ಗೆದ್ದುಕೊಂಡಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾದ್ಯಕ್ಷೆ ಪ್ರೇಮಾ ಸಿ.ಪೂಜಾರಿ ಮತ್ತುಉಡುಪಿ ಜಿಲ್ಲಾ ಆಯುಷ್ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷೆ ಡಾ.ವೀಣಾ ಕಾರಂತ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. ಇದೇ ಸಂದರ್ಭ ಹತ್ತು ಮಂದಿ ಪ್ರತಿಭಾನ್ವಿತ ಬಡ

ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು ಮತ್ತು ಐದು ಮಂದಿ ಕ್ರೀಡಾ ಸಾಧಕರನ್ನು ಗೌರವಿಸಲಾಯಿತು. ಮತ್ಸ್ಯೋದ್ಯಮಿ ಹರೀಶ ಖಾರ್ವಿ, ಶ್ರೀ ವೀರೇಶ್ವರ ದೀಪೋತ್ಸವ ಸಮಿತಿ ಅಧ್ಯಕ್ಷ ರತ್ನಾಕರ ಗಾಣಿಗ, ಗಂಗೊಳ್ಳಿ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಚಿಕ್ಕ ಮೊಗವೀರ, ಮಂಜುನಾಥ ಸಾಲಿಯಾನ ತ್ರಾಸಿ, ಗೋಪಾಲ ಖಾರ್ವಿ ದಾವನಮನೆ, ಗ್ರಾಪಂ ಸಿಬ್ಬಂದಿ ಶೇಖರ ಜಿ., ಸಂಸ್ಥೆಯ ಅಧ್ಯಕ್ಷ ರಜತ್ ಶೇಟ್ ಉಪಸ್ಥಿತರಿದ್ದರು. ಸುಂದರ ಜಿ. ಕಾರ್ಯಕ್ರಮ ನಿರ್ವಹಿಸಿದರು.

Call us

Leave a Reply

Your email address will not be published. Required fields are marked *

seven + six =