ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ನ್ಯಾಷನಲ್ ಇ ಸ್ಕಾಲರ್ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್: http://disabilityaffairs.gov.in/content, https://scholarships.gov.in ಅಥವಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ‘ಸಿ’ ಬ್ಲಾಕ್, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574810/811 ಅನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.