ಪೋಷಣ್ ಮಾಸಾಚರಣೆ ಕಾರ್ಯಕ್ರಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ ಹಾಗೂ ಗ್ರಾಮ ಪಂಚಾಯತ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮಂಗಳವಾರ ಜರಗಿತು.

Click Here

Call us

Call us

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಎನ್., ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಲ್ಲಿ ಹಾಗೂ ಗರ್ಭಿಣಿ ಮತ್ತು ಬಾಣಂತಿಯರಲ್ಲಿನ ಅಪೌಷ್ಟಿಕತೆ ಹೆಚ್ಚಾಗುತ್ತಿದೆ. ಮಕ್ಕಳು, ಬಾಣಂತಿಯರು ಹಾಗೂ ಗರ್ಭಿಣಿಯರು ಸೇವಿಸಬೇಕಾದ ಆಹಾರ ಮತ್ತು ಪೌಷ್ಟಿಕಾಂಶಗಳ ಬಗ್ಗೆ ಜನರಿಗೆ ಅಗತ್ಯ ಮಾಹಿತಿ ನೀಡಿ ಅವರಲ್ಲಿ ಜಾಗೃತಿ ಮೂಡಿಸಬೇಕು. ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೌಷ್ಠಿಕ ಆಹಾರ ನೀಡಲು ಸರಕಾರ ಕ್ರಮಕೈಗೊಂಡಿದ್ದು, ಅವರಲ್ಲಿನ ಅಪೌಷ್ಠಿಕತೆಯನ್ನು ಕಡಿಮೆ ಮಾಡಿ ಅವರ ಆರೋಗ್ಯ ಕಾಪಾಡಲು ಪ್ರಯತ್ನಿಸುತ್ತಿದೆ ಎಂದರು.

Click here

Click Here

Call us

Visit Now

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ, ಗ್ರಾಪಂ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.

ಮಂಜುನಾಥ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಲಯ ಮೇಲ್ವಿಚಾರಕಿ ರಾಜೇಶ್ವರಿ ವಂದಿಸಿದರು. ಬಳಿಕ ಅಂಗನವಾಡಿ ಕಾರ್ಯಕರ್ತೆಯರು ಗ್ರಾಮ ಪಂಚಾಯತ್ ಕಚೇರಿ ಸಮೀಪದಿಂದ ಜಾಥಾ ನಡೆಸಿ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದರು.

Leave a Reply

Your email address will not be published. Required fields are marked *

2 × one =