ಬಾಳೆಬರೆ ಘಾಟ್‌ನಲ್ಲಿ ವಾಹನ ಸಂಚಾರ ನಿಷೇಧ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ತೀರ್ಥಹಳ್ಳಿ- ಕುಂದಾಪುರ ರಾಜ್ಯ ಹೆದ್ದಾರಿ -52 ರ ಬಾಳೆಬರೆ ಘಾಟ್‌ನಲ್ಲಿ ಕಾಂಕ್ರೀಟ್ ಪೇವ್ಮೆಂಟ್ ನಿರ್ಮಾಣ ಕಾಮಗಾರಿ ಕೈಗೊಂಡಿರುವ ಹಿನ್ನಲೆ, ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿ 1989 ರ ಕಲಂ 221(ಎ)(2) & (5) ರನ್ವಯ ಏಪ್ರಿಲ್ 22 ರಿಂದ ಜೂನ್ 5 ರ ವರೆಗೆ ಸದರಿ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

Call us

Click Here

Click here

Click Here

Call us

Visit Now

Click here

ವಾಹನಗಳ ಪರ್ಯಾಯ ಮಾರ್ಗ: ಕುಂದಾಪುರದಿಂದ ತೀರ್ಥಹಳ್ಳಿ ಹಾಗೂ ಶಿವಮೊಗ್ಗ ಕಡೆಗೆ ಹೋಗುವ ಲಘು ವಾಹನಗಳು ಕುಂದಾಪುರ-ಹೆಮ್ಮಾಡಿ-ವಂಡ್ಸೆ-ಕೊಲ್ಲೂರು-ನಿಟ್ಟೂರು ಘಾಟ್ ಮಾರ್ಗವಾಗಿ ಅಥವಾ ಕುಂದಾಪುರ-ಕೋಟೇಶ್ವರ-ಹಾಲಾಡಿ-ಆಗುಂಬೆ ಮಾರ್ಗವಾಗಿ ಅಥವಾ ಕುಂದಾಪುರ-ಬಸ್ರೂರು-ಹುಣ್ಸೆಮಕ್ಕಿ-ಹಾಲಾಡಿ-ಆಗುಂಬೆ ಮಾರ್ಗವಾಗಿ ತೀರ್ಥಹಳ್ಳಿ ಹಾಗೂ ಶಿವಮೊಗ್ಗ ತಲುಪಬಹುದು.

ಕುಂದಾಪುರದಿಂದ ತೀರ್ಥಹಳ್ಳಿಗೆ ಹೋಗುವ ಭಾರಿ ವಾಹನಗಳು ಕುಂದಾಪುರ-ಭಟ್ಕಳ-ಹೊನ್ನಾವರ-ಸಾಗರ-ರಿಪ್ಪನ್ಪೇಟೆ ಮೂಲಕ ತೀರ್ಥಹಳ್ಳಿ ತಲುಪಬಹುದು.

ಕುಂದಾಪುರದಿಂದ ಶಿವಮೊಗ್ಗ ಕಡೆಗೆ ಹೋಗುವ ಭಾರಿ ವಾಹನಗಳು ಕುಂದಾಪುರ-ಭಟ್ಕಳ-ಹೊನ್ನಾವರ-ಸಾಗರ ಮಾರ್ಗವಾಗಿ ಶಿವಮೊಗ್ಗ ತಲುಪುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

4 × 4 =