ಬಿಲ್ಲವ ಸಮಾಜ ಸೇವಾ ಸಂಘ: ಅಭಿನಂದನಾ ಸಮಾರಂಭ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೇವಲ ಬಿಲ್ಲವರು ಮಾತ್ರವಲ್ಲ ವಿಶ್ವ ಮಾನವ ಸಮುದಾಯವನ್ನೆ ಒಟ್ಟುಗೂಡಿಸಬೇಕು ಎನ್ನುವ ಚಿಂತನೆಯನ್ನು ಕಂಡವರು ಬ್ರಹ್ಮಶ್ರೀ ನಾರಾಯಣಗುರುಗಳು. ಗೋಕರ್ಣನಾಥ ಕ್ಷೇತ್ರವಲ್ಲದೆ, 80 ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಅವರು ಪ್ರತಿಷ್ಠೆ ಕಾರ್ಯವನ್ನು ನೆರವೇರಿಸಿದ್ದಾರೆ. ಅವರು ಅಂದು ಸ್ಥಾಪಿಸಿದ್ದ ಶಿಕ್ಷಣ ಸಂಸ್ಥೆಗಳು ಇಂದು ವಿಶ್ವ ವಿದ್ಯಾಲಯಗಳಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದರು.

Call us

Click Here

Click here

Click Here

Call us

Visit Now

Click here

ಅವರು ಇಲ್ಲಿನ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಭಾನುವಾರ ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನಡೆದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯೆಯನ್ನು ಯಾರಿಂದಲೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ವಿದ್ಯೆಗೆ ಮಾತ್ರ ಬಡತವನ್ನು ಹೋಗಲಾಡಿಸುವ ಶಕ್ತಿ ಇದೆ. ಮಕ್ಕಳಲ್ಲಿ ಜ್ಞಾನಾವರಣಕ್ಕೆ ಅವಕಾಶ ಕಲ್ಪಿಸಬೇಕು. ಪ್ರತಿಯೊಂದು ಸಮಾಜ ಸಂಘಟನೆಗಳು ಅವರವರ ದ್ಯೇಯೋದ್ದೇಶಗಳ ಹಿನ್ನೆಲೆಯಲ್ಲಿ ಕೆಲಸ ಮಾಡಬೇಕು. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಧಾರ್ಮಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಬೆಳವಣಿಗೆ ಸಾಧಿಸಿದಲ್ಲಿ ಸಮಾಜಗಳು ಅಭಿವೃದ್ಧಿಯಾಗುತ್ತದೆ. ಸಂಘಟನೆಗಳು ನಿಂತ ನೀರಾಗದೆ ಹರಿಯುವ ನೀರಾಗಬೇಕು. ಭವಿಷ್ಯದ ಪೀಳಿಗೆಯ ಯುವ ಸಮುದಾಯಕ್ಕೆ ನಾಯಕತ್ವ ಅವಕಾಶಗಳು ದೊರಕಬೇಕು. ತುಳು ನಾಡಿನ ವೀರ ಪುರುಷರಾದ ಕೋಟಿ-ಚನ್ನಯ್ಯರ ಬದುಕಿನ ಆದರ್ಶಗಳು ನಮಗೆ ನಿತ್ಯ ಸ್ಮರಣೀಯವಾಗಬೇಕು ಎಂದರು.

ಕರ್ನಾಟಕದಲ್ಲಿ ಬಿಲ್ಲವರು, ಈಡಿಗರು, ನಾಮಧಾರಿಗಳು, ಕೇರಳದಲ್ಲಿ ತೀಯಾ, ಆಂಧ್ರದಲ್ಲಿ ಗೌಡರ್, ತಮಿಳುನಾಡಿನಲ್ಲಿ ನಾಡವರ್, ಗೋವಾದಲ್ಲಿ ಭಂಡಾರಿ, ಉತ್ತರ ಭಾರತದಲ್ಲಿ ಗುಪ್ತಾಸ್ ಸೇರಿದಂತೆ ದೇಶಾದ್ಯಾಂತ ಬಿಲ್ಲವ ಸಮುದಾಯ ಬೇರೆ ಬೇರೆ ಹೆಸರಿನಲ್ಲಿ ಗುರುತಿಸಿಕೊಂಡಿದೆ. ಸೈನ್ಯ, ವೈದ್ಯಕೀಯ, ತಂತ್ರಜ್ಞಾನ, ಶಿಕ್ಷಣ, ಉದ್ಯಮ, ರಾಜಕೀಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಬಿಲ್ಲವ ಸಮುದಾಯವನ್ನು ಕೇವಲ ಮೂರ್ತೆಧಾರಿಕೆಗೆ ಸೀಮಿತಗೊಳಿಸುವ ಹುನ್ನಾರದಿಂದ ಹೊರ ಬರಬೇಕಾಗಿದೆ ಎಂದ ಅವರು, ಎಲ್ಲ ಸಮಾಜದವರೊಂದಿಗೆ ಪ್ರೀತಿ, ವಿಶ್ವಾಸದ ನಡೆಯೊಂದಿಗೆ ನಮ್ಮ ಸಮಾಜವನ್ನು ಬೆಳೆಸುವ ಗುರಿ ಸಂಘಟನೆಯವರಲ್ಲಿ ಇರಬೇಕು ಎಂದರು.

ಬಿಲ್ಲವ ಸೇವಾ ಸಮಾಜದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಉದ್ಯಮಿ ಗೋವಿಂದ ಬಾಬು ಪೂಜಾರಿ, ಬಿಲ್ಲವ ಸೇವಾ ಸಂಘದ ಉಪಾಧ್ಯಕ್ಷರಾದ ಭಾಸ್ಕರ ಬಿಲ್ಲವ, ರಾಮ ಪೂಜಾರಿ, ನಾರಯಣಗುರು ಯುವಕ ಮಂಡಲ ಅಧ್ಯಕ್ಷ ಶ್ರೀನಾಥ್ ಪೂಜಾರಿ ಕಡ್ಗಿ ಮನೆ, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ ಶೆಶಿಕಲಾ ಬಿಜೂರು ಇದ್ದರು.

Call us

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಭಾಸ್ಕರ ಬಿಲ್ಲವ, ವಿಜಯ ಎಸ್.ಪೂಜಾರಿ, ಮಹೇಂದ್ರಕುಮಾರ ಪೂಜಾರಿ, ಜ್ಯೋತಿ ಉದಯ್ಕುಮಾರ ಪೂಜಾರಿ, ಶೇಖರ ಪೂಜಾರಿ ಹುಂಚಾರಬೆಟ್ಟು, ಕೆ.ಪಿ.ಶೇಖರ ಪೂಜಾರಿ, ವಿಶ್ವನಾಥ ಪೂಜಾರಿ ಗರಡಿಮನೆ ಹಾಗೂ ನೂತನವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿರುವ ಬಿಲ್ಲವ ಸಮುದಾಯದ ಗ್ರಾಮ ಪಂಚಾಯಿತಿ ಸದಸ್ಯರನ್ನು ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅಭಿನಂದಿಸಿದರು. ಗಣೇಶ್ ಪೂಜಾರಿ ವಿಠ್ಠಲವಾಡಿ ಸ್ವಾಗತಿಸಿದರು, ಭಾಸ್ಕರ್ ವಿಠ್ಠಲವಾಡಿ ನಿರೂಪಿಸಿದರು.

Leave a Reply

Your email address will not be published. Required fields are marked *

2 × 3 =