ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಬೈಂದೂರು ಪೇಟೆಯ ಲಾಡ್ಜ್ವೊಂದರಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಶಿರೂರು ಗ್ರಾಮದ ಲಾಡ್ಜ್ವೊಂದರಲ್ಲಿ ವ್ಯಕ್ತಿಯೋರ್ವ ಕಾಲುಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಬೈಂದೂರು ಲಾಡ್ಜ್ವೊಂದರಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದು ಮಂಗಳೂರು ಬಿಜೈ ನ್ಯೂರೋಡ್ ನಿವಾಸಿ ಮನೋಜ್ ಆರ್ ಸಾಲಿಯಾನ್ ( 45) ಎಂದು ಗುರುತಿಸಲಾಗಿದೆ. ಅವರು ಭಟ್ಕಳದ ಶಿರಾಲಿ ಎಂಬಲ್ಲಿರುವ ನೆಟ್ಕಾನ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.
ಶಿರೂರು ಸಮೀಪದ ಲಾಡ್ಜ್ವೊಂದರಲ್ಲಿ ಉಳಿದುಕೊಂಡಿದ್ದ ಎಂ.ಆರ್ ಬಾಬು ಎಂಬವರು ಲಾಡ್ಜ್ಗೆ ಹೋಗಲು ಮೆಟ್ಟಿಲು ಏರುವಾಗ ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿದ್ದ ಪರಿಣಾಮ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಎರಡು ಪ್ರಕರಣ ಬೈಂದೂರು ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.