ಯೋಗದ ಮೂಲಕ ಒತ್ತಡ ಮತ್ತು ಉದ್ವೇಗದ ನಿರ್ವಹಣೆ – ರಾಷ್ಟ್ರೀಯ ವೆಬಿನಾರ್

Call us

Call us

ಕಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:  ಭಂಡಾರ್ಕಾರ‍್ಸ್ ಕಾಲೇಜಿನಲ್ಲಿ ಐಕ್ಯೂಎಸಿ, ದೈಹಿಕ ಶಿಕ್ಷಣ ವಿಭಾಗ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಮತ್ತು ಭಾರತೀಯ ದೈಹಿಕ ಶಿಕ್ಷಣ ಪೌಂಡೇಶನ್ ಇದರ ಕರ್ನಾಟಕದ ಕೇಂದ್ರ ಇವರ ಸಹಯೋಗದಲ್ಲಿ ಯೋಗದ ಮೂಲಕ ಒತ್ತಡ ಮತ್ತು ಉದ್ವೇಗದ ನಿರ್ವಹಣೆ ಎಂಬ ವಿಷಯದ ಕುರಿತು ರಾಷ್ಟ್ರೀಯ ವೆಬಿನಾರ್ ನಡೆಯಿತು.

Click Here

Call us

Call us

ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾದ ಮಂಗಳೂರಿನ ಯೋಗಚೇತನ ಯೋಗ ಸಂಶೋಧನಾ ಕೇಂದ್ರದ ಶೈಕ್ಷಣಿಕ ನಿರ್ದೇಶಕರಾದ ಚೇತನಾ ಬಾಡೇಕರ್ ಮಾತನಾಡಿ, ಯೋಗ ಒಂದು ಕಲೆ. ಅಂದರೆ ಯೋಗ ಕಲಿಯುವಿಕೆಯಲ್ಲಿ ಮತ್ತು ತೊಡಗಿಸಿಕೊಳ್ಳವಲ್ಲಿ ನಿರಂತರತೆ ಬೇಕಾಗುತ್ತದೆ. ಯೋಗವನ್ನು ಕಲಿಯುವಲ್ಲಿಯೂ ಸಹ ಕೆಲವು ಅಂಶಗಳನ್ನು ಗಮನಿಸಬೇಕು. ವ್ಯಕ್ತಿ ತನಗೆ ಅನುಕುಲ ಮತ್ತು ಮಾನಸಿಕ ದೈಹಿಕ ಅಗತ್ಯವನ್ನು ಅರಿತು ಆಯಾ ಯೋಗವಿಧಾನದಲ್ಲಿ ತೊಡಗಿಸಿಕೊಂಡಾಗ ಒಂದು ರೀತಿಯ ಉತ್ತಮ ಫಲಿತಾಂಶ ಸಿಗಲು ಸಾಧ್ಯ ಅಲ್ಲದೇ ಯೋಗದಿಂದ ಉತ್ತಡ ಮತ್ತು ಉದ್ವೇಗವನ್ನು ನಿರ್ವಹಣೆಯನ್ನು ಖಂಡಿತ ಮಾಡಬಹುದು. ಅದಕ್ಕೆ ತಕ್ಕ ಹಾಗೆ ಯೋಗಾಭ್ಯಾಸವು ಅತಿ ಮುಖ್ಯ. ಅಲ್ಲದೇ ದಿನಕ್ಕೆ 30 ನಿಮಿಷ ಯೋಗಕ್ಕೆಂದು ಮಿಸಲಿಡಿ ಮತ್ತು ವಾರದಲ್ಲಿ ಕನಿಷ್ಠ ಎರಡು ತಾಸು ಯೋಗದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಿ.  ಆಗ ತನ್ನಂತಾನೆ ಮಾನಸಿಕ ಉತ್ತಡ ಮತ್ತು ಉದ್ವೇಗದ ಸರಿಯಾದ ನಿರ್ವಹಣೆ ಮಾಡಲು ಸಾಧ್ಯವಾಗುತ್ತದೆ ಎಂದು ಕರೆ ನೀಡಿದರು.

Click here

Click Here

Call us

Visit Now

ಭಂಡಾರ್ಕಾರ‍್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ. ನಾರಾಯಣ ಶೆಟ್ಟಿ ಸ್ವಾಗತಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಕಿಶೋರ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾಲೇಜಿನ ಐಟಿ ತಂಡದ  ಸದಸ್ಯರಾದ ಅಮರ್ ಸಿಕ್ವೆರಾ, ಗಣೇಶ್ ಕುಮಾರ್, ಶಂಕರನಾರಾಯಣ ಉಪಾಧ್ಯಾಯ ಮತ್ತು ವಿಕ್ರಮ್ ತಾಂತ್ರಿಕವಾಗಿ ಸಹಕರಿಸಿದರು. ಉಪನ್ಯಾಸಕಿ ಸ್ನೇಹಾ ಎಸ್ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

two + seventeen =