ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರಕ್ತದಾನ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಗಂಗೊಳ್ಳಿಯ ಯಕ್ಷಾಭಿಮಾನಿ ಬಳಗ ಮತ್ತು ರಕ್ತದಾನಿಗಳ ಬಳಗದ ಸದಸ್ಯರು ರಕ್ತದಾನದ ಮಹತ್ವ ಮತ್ತು ಪ್ರಚಾರದ ಧ್ಯೇಯದೊಂದಿಗೆ ಸತತ ೧೧ನೇ ವರುಷ ಗಂಗೊಳ್ಳಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.
ಗಂಗೊಳ್ಳಿಯ ಯಕ್ಷಾಭಿಮಾನಿ ಬಳಗ ಮತ್ತು ರಕ್ತದಾನಿಗಳ ಬಳಗದ ವತಿಯಿಂದ ಪ್ರತಿ ವ?ದಂತೆ ಈ ವ? ಕೂಡ ರಕ್ತದಾನಿ, ಯಕ್ಷಾಭಿಮಾನಿ ರಕ್ತದಾನಿ ಬಳಗದ ಅಧ್ಯಕ್ಷ ಗುರುಚರಣ್ ಖಾರ್ವಿ ನೇತೃತ್ವದಲ್ಲಿ ಸುಮಾರು ೧೦ ಜನರು ’ರಕ್ತದಾನದ ಜಾಗೃತಿ ಮತ್ತು ರಕ್ತದಾನದ ಪ್ರಚಾರ’ ಕುರಿತು ಗಂಗೊಳ್ಳಿಯಿಂದ ಧರ್ಮಸ್ಥಳಕ್ಕೆ ಸತತ ೧೧ನೇ ವ?ದ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು. ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯಲ್ಲಿರುವ ಶ್ರೀ ಸಂಪಿಗೆ ಜಟ್ಟಿಗೇಶ್ವರ ದೇವಸ್ಥಾನದ ಬಳಿಯಿಂದ ಗುರುವಾರ ಬೆಳಿಗ್ಗೆ ಪಾದಯಾತ್ರೆ ಆರಂಭಿಸಿದ್ದಾರೆ.
ಗಂಗೊಳ್ಳಿಯ ಯಕ್ಷಾಭಿಮಾನಿ ಬಳಗ ಹಾಗೂ ರಕ್ತದಾನಿಗಳ ಬಳಗ ’ರಕ್ತಂ ಜೀವಜಲ ದಾನಾದಿ ಕಲ್ಪಿತ ಸಕಲ ಸತ್ಪಲ’ ಎಂಬ ಧ್ಯೇಯ ವಾಕ್ಯದೊಂದಿಗೆ ಕಳೆದ ೧೦ ವರ್ಷಗಳಿಂದ ಗಂಗೊಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಯಾರಿಗಾದರೂ ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಇದ್ದಾಗ ಈ ಬಳಗದ ಸ್ವಯಂಪ್ರೇರಿತ ರಕ್ತದಾನಿಗಳು ಯಾವುದೇ ಪ್ರಚಾರಕ್ಕೆ ಬೆಲೆ ಕೊಡದೆ ಕೇವಲ ಮಾನವೀಯತೆ ಮಾತ್ರ ಮನದಲ್ಲಿಟ್ಟುಕೊಂಡು ಯಾವುದೇ ಪ್ರತಿಫಲ ಅಪೇಕ್ಷೆ ಮಾಡದೇ ಯಾವುದೇ ಸಮಯದಲ್ಲಿ ನಮ್ಮ ಸ್ವಂತ ಖರ್ಚಿನಲ್ಲಿ ಹೋಗಿ ರಕ್ತದಾನ ಮಾಡುತ್ತಿದ್ದಾರೆ.