ಕುಂದಾಪುರ: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವು

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಇಲ್ಲಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಓವರ್ಟೆಕ್ ಮಾಡುತ್ತಿದ್ದ ಬೈಕ್ ಸವಾರ ಆಯತಪ್ಪಿ ರಸ್ತೆಗೆ ಬಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಹರಿದು ಮೃತಪಟ್ಟ ಧಾರುಣ ಘಟನೆ ವರದಿಯಾಗಿದೆ. ಮೃತರನ್ನು ಕೋಡಿ ಸಮೀಪದ ಅರಳುಗುಡ್ಡೆ ನಿವಾಸಿ ಉತ್ಮೇಶ್ ಪೂಜಾರಿ (36) ಎಂದು ಗುರುತಿಸಲಾಗಿದೆ.

Call us

Call us

ಘಟನೆಯ ವಿವರ:
ಹಕ್ಲಾಡಿ ಸಮೀಪದ ಹೊಳ್ಮಗೆ ತೆರಳುತ್ತಿದ್ದ ಸಂದರ್ಭ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪ ಬೈಕೊಂದನ್ನು ಓವರ್ಟೆಕ್ ಮಾಡುತ್ತಿದ್ದ ಸಂದರ್ಭ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ಇದೇ ಸಂದರ್ಭ ಹಿಂದಿನಿಂದ ಬಂದ ಮೀನು ಲಾರಿಯೊಂದು ಉತ್ಮೇಶ್ ಅವರ ತಲೆಯ ಮೇಲೆ ಹರಿದಿದೆ. ಹೆಲ್ಮೆಟ್ ಧರಿಸಿದ್ದರೂ ಲಾರಿ ಹರಿದ ರಭಸಕ್ಕೆ ಹೆಲ್ಮೆಟ್ ಛದ್ರಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾರೆ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದ ಉತ್ಮೇಶ್ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಹಾಗೂ ಕುಟುಂಬಿಕರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

6 + thirteen =