ವಿದೇಶಕ್ಕೆ ತೆರಳುವವರಿಗೆ ಪ್ರಮಾಣ ಪತ್ರ ನೀಡಲು ಅಧಿಕಾರಿಗಳ ನೇಮಕ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಿಂದ ವಿದ್ಯಾಭ್ಯಾಸಕ್ಕಾಗಿ, ನೌಕರಿಗಾಗಿ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಒಲಂಪಿಕ್ಸ್‌ಗಾಗಿ ವಿದೇಶಕ್ಕೆ ತೆರಳುವ ಫಲಾನುಭವಿಗಳಿಗೆ ಲಸಿಕಾಕರಣಕ್ಕಾಗಿ ಅಗತ್ಯವಿರುವ ಅನುಬಂಧ-4 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ನೀಡಲು ದೃಢೀಕರಿಸುವ ಅಧಿಕಾರಿಯಾಗಿ, ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು ಮೊ.ನಂ: 8277734612 ಹಾಗೂ ಈಗಾಗಲೇ ಮೊದಲನೇ ಡೋಸ್ ಲಸಿಕೆ ಪಡೆಯುವಾಗ ನೋಂದಣಿಗಾಗಿ ಪಾಸ್ಪೋರ್ಟ್ ನಂಬರನ್ನು ಬಳಸದೇ ಲಸಿಕೆ ಪಡೆದಿದ್ದರೆ ಅಂತಹ ಫಲಾನುಭವಿಗಳಿಗೆ ಕೋವಿಶೀಲ್ಡ್ ಎರಡನೇ ಡೋಸ್ ಲಸಿಕಾಕರಣಕ್ಕಾಗಿ ಅನುಬಂಧ-5 ರಲ್ಲಿ ಲಸಿಕಾ ಪ್ರಮಾಣ ಪತ್ರ ನೀಡಲು ದೃಢೀಕರಿಸುವ ಅಧಿಕಾರಿಯಾಗಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂ ದಾಖಲೆಗಳ ಉಪನಿರ್ದೇಶಕರಾದ ರವೀಂದ್ರ ಮೊ.ನಂ: 8660523556 ಇವರನ್ನು, ನಗರದ ಡಾ.ಬಿ.ಆರ್. ಶೆಟ್ಟಿ- ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೇಮಕ ಮಾಡಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.

Call us

Click Here

Click here

Click Here

Call us

Visit Now

Click here

Leave a Reply

Your email address will not be published. Required fields are marked *

1 × 5 =