ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಮಹಾಸಭೆ, ಶೇ.13 ಡಿವಿಡೆಂಟ್ ಘೋಷಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಬೈಂದೂರು 2019-20ನೇ ಸಾಲಿನಲ್ಲಿ 16.41 ಲಕ್ಷ ರೂ. ಲಾಭಗಳಿಸಿ ಸದಸ್ಯರಿಗೆ ಶೇ.13 ಡಿವಿಡೆಂಟ್ ಘೋಷಿಸಿದೆ. ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಾಲಗಳ ವಿತರಣೆ ಹಾಗೂ ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು.

Click Here

Call us

Call us

ಭಾನುವಾರ ಬೈಂದೂರಿನ ಸಂಘದ ಪ್ರಧಾನ ಕಛೇರಿಯಲ್ಲಿ ಜರುಗಿದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸಹಕಾರಿಯು 2019-20ನೇ ಸಾಲಿನಲ್ಲಿ ರೂ. 18.60 ಕೋಟಿ ಠೇವಣಿ ಹೊಂದಿದ್ದು 18.55 ಕೋಟಿ ಸಾಲ ನೀಡಿದೆ.

Click here

Click Here

Call us

Visit Now

ಕಳೆದ ಸಾಲಿನ ಕಾರ್ಯಯೋಜನೆಯಲ್ಲಿ ನಿಗದಿಪಡಿಸಿದ ಠೇವಣಿ, ಸಾಲ, ಅನುತ್ಪಾದಕ ಸಾಲ, ಸುಸ್ತಿ ಸಾಲ ಹಾಗೂ ಮುಂಗಡ ಲಾಭಗಳಿಕೆಯಲ್ಲಿ ನಿಗದಿತ ಗುರಿಯನ್ನು ಮೀರಿ ಸಂಸ್ಥೆ ಪ್ರಗತಿ ಸಾಧಿಸಿದೆ. ಆಡಿಟ್ ವರ್ಗೀಕರಣದಲ್ಲಿ ಸಂಸ್ಥೆ ’ಎ’ ತರಗತಿಯನ್ನು ಹೊಂದಿದೆ ಎಂದರು. ಜಿಲ್ಲೆಯಲ್ಲಿಯೇ ಮಾದರಿ ಸಂಸ್ಥೆಯಾಗಿ ರೂಪುಗೊಳ್ಳುತ್ತಿರುವ ಹಿಂದೆ ಗ್ರಾಹಕರ ಸಹಕಾರ ಹಾಗೂ ನೌಕರರ ಶ್ರಮವಿದೆ ಎಂದರು.

ಸೌಹಾರ್ದ ಸಹಕಾರಿಯ ವ್ಯಾಪ್ತಿಯಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.ಶೇ. 100ರಷ್ಟು ವಸೂಲಾತಿ ಮಾಡಿರುವ ಗೋಳಿಹೊಳೆ ಶಾಖಾ ಪ್ರಬಂಧಕ ರಾಘವೇಂದ್ರ, ಕಂಬದಕೋಣೆ ಶಾಖಾ ಪ್ರಬಂಧಕ ರಾಜೇಂದ್ರ ದೇವಾಡಿಗರನ್ನು ಗೌರವಿಸಲಾಯಿತು.

ನಿರ್ದೇಶಕರುಗಳಾದ ಮಂಜು ಪೂಜಾರಿ ನಾವುಂದ, ರಾಮಕೃಷ್ಣ ಖಾರ್ವಿ, ಪ್ರಶಾಂತ್ ಪೂಜಾರಿ, ಶಿವರಾಮ ಪೂಜಾರಿ, ಅಣ್ಣಪ್ಪ ಪೂಜಾರಿ, ಶಂಕರ ಪೂಜಾರಿ, ಮಂಜುನಾಥ ಪೂಜಾರಿ, ಜಯಶೀಲ ವಿ. ರಾವ್, ಬೇಬಿ, ನಾಗರತ್ನ ಇದ್ದರು. ಸಂಘದ ಉಪಾಧ್ಯಕ್ಷ ಎಂ. ವಿನಾಯಕ ರಾವ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಸೀತಾರಾಮ ಮಡಿವಾಳ ವಾರ್ಷಿಕ ವರದಿ ವಾಚಿಸಿದರು. ನಾವುಂದ ಶಾಖಾ ಪ್ರಬಂಧಕ ಶ್ರೀನಿವಾಸ್ ಧನ್ಯವಾದಗೈದರು. ನಾಗೂರು ಶಾಖಾ ಪ್ರಬಂಧಕ ನಾಗರಾಜ ಯಡ್ತರೆ ಸಹಕರಿಸಿದರು.

Call us

Leave a Reply

Your email address will not be published. Required fields are marked *

9 + seventeen =