ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿಶ್ವ ಪರಿಸರ ದಿನದ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕುಂದಾಪುರ ಇವರ ವತಿಯಿಂದ ಸರ್ಕಾರಿ ಆಸ್ಪತ್ರೆ, ಸರ್ಕಾರಿ ಉರ್ದು ಶಾಲೆ ಬಸ್ರೂರು, ಗಂಗೊಳ್ಳಿ ಮತ್ತು ಶಿರೂರಿನಲ್ಲಿ ಸಸ್ಯಗಳನ್ನು ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಲಾಯಿತು.
ಈ ಸಂದರ್ಭ ಆರೋಗ್ಯ ಅಧಿಕಾರಿ ಡಾ. ವಿದ್ಯಾ , ಡಾ. ರಮೇಶ್ ಶೆಟ್ಟಿ ಮತ್ತು ಇತರ ಸಿಬ್ಬಂದಿಗಳು ಹಾಗೂ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಇಮ್ತಿಯಾಜ್ ಬಸ್ರೂರ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ) ಕುಂದಾಪುರ ಜಿಲ್ಲಾ ಸಮಿತಿ ಸದಸ್ಯ ಫಯೀಜ್ ಬಸ್ರೂರ್, ಸಹಾದ್ ಬಸ್ರೂರ್ ಮತ್ತು ಸದಸ್ಯರಾದ ಸಮೀರ್, ಅಫ್ನಾನ್ ಉಪಸ್ಥಿತರಿದ್ದರು.