ಸೈಬ್ರಕಟ್ಟೆ ರೋಟರಿ ಕ್ಲಬ್‌ನಿಂದ ಉಚಿತ ಮಧುಮೇಹ ಶಿಬಿರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ರೋಟರಿ ಇಂಡಿಯಾ ಮತ್ತು ‘ಆರ್ ಎಸ್ ಎಸ್ ಡಿ ಐ’ ಯೋಜನೆಯಾದ ಒಂದೇ ದಿನದಲ್ಲಿ ಮಿಲಿಯನ್ ಬ್ಲಡ್ ಶುಗರ್ ಟೆಸ್ಟ್ ಮಾಡುವ ಉದ್ದೇಶದಿಂದ ಇಡೀ ಭಾರತದಲ್ಲಿ ಶಿಬಿರ ಹಮ್ಮಿಕೊಂಡಿದ್ದು ಅದರ ಅಂಗವಾಗಿ ಸೈಬ್ರಕಟ್ಟೆ ರೋಟರಿ ಕ್ಲಬ್‌ನಿಂದ ಆರೋಗ್ಯ ಕೇಂದ್ರದಲ್ಲಿ ಉಚಿತ ಮಧುಮೇಹ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

Click here

Click Here

Call us

Call us

Visit Now

Call us

Call us

ಕಾರ್ಯಕ್ರಮವನ್ನು ರೋ ವಲಯ 3ರ ಸಹಾಯಕ ಗವರ್ನರ್ ಪದ್ಮನಾಭ್ ಕಾಂಚನ್ ಉದ್ಘಾಟಿಸಿ ಮಾತನಾಡಿ, ಇಂದು ಇಡೀ ಭಾರತದಲ್ಲಿ ರೋಟರಿ ಅವರಿಂದ ಮಿಲಿಯನ್ ಗಟ್ಟಲೆ ಮಧುಮೇಹ ತಪಾಸಣೆ ನಡೆಸಿ ಗಿನ್ನೆಸ್ ರೆಕಾರ್ಡ್ ಮಾಡುವ ಯೋಜನೆ ಇದ್ದು,ಎಲ್ಲ ಸಾರ್ವಜನಿಕರು ಉಪಯೋಗ ಪಡೆದುಕೊಳ್ಳಿ ಮತ್ತು ಭಾರತ ವು ಸಕ್ಕರೆ ಕಾಯಿಲೆ ಯಲ್ಲಿ ವಿಶ್ವದಲ್ಲಿ 2ನೆ ಸ್ಥಾನದಲ್ಲಿದ್ದು ಹೆಚ್ಚು ಹೆಚ್ಚು ವಯಸ್ಸಿನ ಭೇದ ಇಲ್ಲದೆ ಕಾಲ ಕಾಲಕ್ಕೆ ರಕ್ತ ತಪಾಸಣೆ ಮಾಡಿ ಈ ಕಾಯಿಲೆ ತಡೆಗಟ್ಟುವಲ್ಲಿ ಸಫಲಾರಗಬೇಕು ಎಂದು ಸಲಹೆ ನೀಡಿದರು.

ಸೈಬ್ರಕಟ್ಟೆಯ ವೈದ್ಯಾಧಿಕಾರಿ ಡಾ. ಜಯಶೀಲ ಆಚಾರ್ ಮಾತನಾಡಿ ಸಕ್ಕರೆ ತುಂಬಾ ಸಿಹಿ ಯಾಗಿದ್ದು ಅದು ದೇಹದಲ್ಲಿ ಹೆಚ್ಚಾದರೆ ಅಂಗಾಂಗಗಳಿಗೆ ಮಾರಕವಾಗಿ ಬದುಕು ಕಹಿ ಆಗುತ್ತೆ ಆದ್ದರಿಂದ ಸರಿಯಾಗಿ ತಪಾಸಣೆ ನಡೆಸಿ ಮಧುಮೇಹ ಕಾಣಿಸಿಕೊಂಡರೆ ಆರಂಭದಲ್ಲಿಯೇ ಉತಮ ಚಿಕಿತ್ಸೆ ಆಹಾರ ಕ್ರಮ ಮತ್ತು ವ್ಯಾಯಾಮ ದಿಂದ ಹತೋಟಿಯಲ್ಲಿ ಬಹುದು ,ಹೆದರದೆ ಕಾಲ ಕಾಲಕ್ಕೆ ಶುಗರ್ ಟೆಸ್ಟ್ ಅಗತ್ಯ ಅಂತ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ರೋ ಅಧ್ಯಕ್ಷ ಪ್ರಸಾದ್ ಭಟ್ ವಹಿಸಿದ್ದರು,ವಲಯ ಸೇನಾನಿ ವಿಜಯಕುಮಾರ್ ಶೆಟ್ಟಿ ಮತ್ತು ಕಾರ್ಯದರ್ಶಿ ಅಣ್ಣಯ್ಯ ದಾಸ್ ಹಾಗೂ ಶಿಬಿರಾರ್ಥಿಗಳು ರೋಟರಿ ಸದಸ್ಯರು ಉಪಸ್ಥಿತರಿದ್ದರು. ಸುಮಾರು 100 ರಷ್ಟು ಮಧುಮೇಹ ತಪಾಸಣೆ ನಡೆಸಲಾಯಿತು.

Leave a Reply

Your email address will not be published. Required fields are marked *

19 − three =