ಹೂವು, ಹಣ್ಣು, ತರಕಾರಿ ಬೆಳೆಗಾರರ ಪರಿಹಾರಕ್ಕೆ ಅರ್ಜಿ ಅಹ್ವಾನ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೋವಿಡ್-19 ರ ಎರಡನೆ ಅಲೆ ಕಾರಣ ರಾಜ್ಯದಲ್ಲಿ ವಿಧಿಸಿರುವ ಜನತಾಕರ್ಪ್ಯೂಅವಧಿಯಲ್ಲಿ ಹೂವು, ಹಣ್ಣು ಹಾಗೂ ತರಕಾರಿ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಹೆಕ್ಟೇರ್ ರೂ. 10,000 ಪರಿಹಾರವನ್ನು ಗರಿಷ್ಟ 1 ಹೆಕ್ಟೇರ್ ಗೆ ಹಾಗೂ ಕನಿಷ್ಟ ರೂ.2000 ಕ್ಕೆ ಮಿತಿಗೊಳಿಸಿ ವಿತರಿಸಲಾಗುವುದು.

Call us

Click Here

Click here

Click Here

Call us

Visit Now

Click here

ವಾರ್ಷಿಕ ಹೂವು, ಹಣ್ಣು ಮತ್ತು ತರಕಾರಿ ಬೆಳೆಗಳಿಗೆ 2021-22 ನೇ ಸಾಲಿನ ಬೇಸಿಗೆ ಬೆಳೆ ಸಮೀಕ್ಷೆ ಹಾಗೂ ಬಹುವಾರ್ಷಿಕ ಬೆಳೆಗಳಿಗೆ 2021-22 ನೇ ಸಾಲಿನಮುಂಗಾರು ಬೆಳೆ ಸಮೀಕ್ಷೆ ಮಾಹಿತಿಯಆಧಾರದಲ್ಲಿ ಪಾವತಿಸಲು ಸರ್ಕಾರದ ಸೂಚನೆಯಿದ್ದು, ಬೆಳೆಸಮೀಕ್ಷೆಯಲ್ಲಿ ನಮೂದಾಗಿರುವ ಹಾಗೂ ಇಲಾಖೆಯ ತಂತ್ರಾಶದಲ್ಲಿ ನೊಂದಣಿಯಾಗಿರುವ ಹಾಗೂ ನೊಂದಣಿಯಾಗದೆಇರುವರೈತರ ವಿವರಗಳು ತೋಟಗಾರಿಕೆ ಇಲಾಖಾ ಕಛೇರಿಗಳಲ್ಲಿ ಲಭ್ಯವಿರುತ್ತದೆ.

ರೈತರು ಈಗಾಗಲೇಇಲಾಖೆಯ FRUITS ತಂತ್ರಾಂಶದಲ್ಲಿ ನೊಂದಣಿಯಾಗಿದ್ದರೆ ಅರ್ಹ ರೈತರಿಗೆ ಪರಿಹಾರವನ್ನು ನೇರವಾಗಿ ಪಾವತಿಸಲಾಗುವುದು. FRUITS ತಂತ್ರಾಂಶದಲ್ಲಿ ನೋಂದಣಿಯಾಗದೇ ಇರುವ ರೈತರು ತಮ್ಮಆಧಾರ್ ನ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಹಾಗೂ ಮೊಬೈಲ್ ಸಂಖ್ಯೆಯ ವಿವರಗಳನ್ನು ತಾಲೂಕು ತೋಟಗಾರಿಕೆ ಇಲಾಖೆಯ ಕಛೇರಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯ ಜಿಲ್ಲಾ ಅಥವಾ ಸಂಬಂಧಿಸಿದ ತಾಲೂಕು ಮಟ್ಟದ ಕಛೇರಿಯನ್ನು ಹಾಗೂ ಜಿಲ್ಲೆಯ ವಿವಿಧ ತೋಟಗಾರಿಕೆ ಇಲಾಖಾ ಕಚೇರಿಗಳ ದೂರವಾಣಿ ಸಂಖ್ಯೆ: ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ.), ಉಡುಪಿ ಜಿಲ್ಲೆ: 0820-2531950, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.), ಉಡುಪಿ ತಾಲೂಕು: 0820-2522837, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.),ಕುಂದಾಪುರ ತಾಲೂಕು: 08254-230813, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.), ಕಾರ್ಕಳ ತಾಲೂಕು: 08258-230288 ನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

sixteen − 7 =