Kundapra.com ಕುಂದಾಪ್ರ ಡಾಟ್ ಕಾಂ

ಫೆ. 16 : ಶ್ರೀ ಬಗಳಾಂಬ ತಾಯಿ ಸನ್ನಿಧಿಯಲ್ಲಿ ಬ್ರಹ್ಮಕಲಶಾಭಿಷೇಕ, ಶತಚಂಡಿಕಾಯಾಗ, ರಜತ ಪ್ರಭಾವಳಿ ಸಮರ್ಪಣೆ

ಕುಂದಾಪುರ: ಚಿಕ್ಕನ್‌ಸಾಲ್ ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಗುರುಪರಾಶಕ್ತಿ ಮಠ, ಮರಕಡದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿಗಳ ಅನುಗ್ರಹದೊಂದಿಗೆ ವೇ. ಮೂ. ಕೆ. ಚಂದ್ರಶೇಖರ ಸೋಮಯಾಜಿಯವರ ನೇತೃತ್ವದಲ್ಲಿ ಫೆ.೧೧ರಿಂದ ಆರಂಭಗೊಂಡಿದ್ದು ಫೆ. ೧೬ರವರೆಗೆ ನಡೆಯಲಿದೆ.

ಫೆ.16ರಂದು ಬೆಳಿಗ್ಗೆ 7ಕ್ಕೆ ಬ್ರಹ್ಮಕಲಶಾಭಿಷೇಕ, ಚತಚಂಡಿಕಾಯಾಗ ಪೂರ್ಣಾಹುತಿ, ತಾಯಿಗೆ ರಜತ ಪ್ರಭಾವಳಿ ಸಮರ್ಪಣೆ, ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 6ಕ್ಕೆ ಕುಂದಾಪುರ ಮದ್ದುಗುಡ್ಡೆಯ ಶ್ರೀ ಮಾಸ್ತಿಯಮ್ಮ ಭಜನಾ ಮಂಡಳಿಯವರಿಂದ ಭಜನೆ, ರಾತ್ರಿ ೯ರಿಂದ ಕಟೀಲು ಶ್ರೀ ದುರ್ಗಾರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ನಡೆಯಲಿದೆ ಎಂದು ಉತ್ಸವ ಸಮಿತಿ ಪ್ರಕಟನೆ ತಿಳಿಸಿದೆ.

Exit mobile version