Kundapra.com ಕುಂದಾಪ್ರ ಡಾಟ್ ಕಾಂ

ಆಂಡ್ರೋಯ್ಡ್ ಅಪ್ಲಿಕೇಶನ್ ಆಪ್ ಡೆವಲೊಪ್‌ಮೆಂಟ್ ಕಾರ್ಯಾಗಾರ

ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲಿ ಕಂಪ್ಯೂಟರ್ ವಿಭಾಗವು ಐಐಟಿ ಮದ್ರಾಸ್ ಇದರೊಂದಿಗೆ ಆಂಡ್ರೋಯ್ಡ್ ಅಪ್ಲಿಕೇಶನ್ ಆಪ್ ಡೆವಲೊಪ್‌ಮೆಂಟ್ ಎಂಬ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ್ ಶೆಟ್ಟಿ ಮಾತನಾಡಿ ಹೊಸ ತಂತ್ರಜ್ನಾನವನ್ನು ಹೆಚ್ಚೆಚ್ಚು ಉಪಯೋಗಿಸಿಕೊಳ್ಳಬೇಕು. ಅದಕ್ಕೆ ಪೂರಕವಾಗಿ ಕಾಲೇಜು ಸಹ ಅವಕಾಶವನ್ನು ಒದಗಿಸಿಕೊಡುತ್ತದೆ. ಅಲ್ಲದೇ ವಿದ್ಯಾರ್ಥಿಗಳು ಹೊಸ ತಂತ್ರಜ್ನಾನವನ್ನು ಕಲಿತು ಆಧುನೀಕೃತ ತಾಂತ್ರಿಕ ಜಗತ್ತಿಗೆ ತಮ್ಮನ್ನು ತೆರೆದುಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ನಾರಾಯಣ ತಂತ್ರಿ, ಕಾರ್ಯಕ್ರಮ ಸಂಚಾಲಕರಾದ ಕೆ. ಗಣೇಶ್, ಸಂಪನ್ಮೂಲ ವ್ಯಕ್ತಿಗಳಾದ ಶಿವ ಶ್ರೀವಾಸ್ತವ ಮತ್ತು ಬಂಡನವಾಲ್ ಭಗವಾನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಕಾಡೆಮಿ ಆಪ್ ಜನರಲ್ ಎಜುಕೇಶನ್ ಇಅದರ ಆಡಳಿತಾಧಿಕಾರಿಗಳಾದ ಡಾ. ಹೆಚ್. ಶಾಂತಾರಾಮ್ ಮಾತನಾಡಿ ಪಠ್ಯಕ್ರಮದಲ್ಲಿರುವ ವಿಷಯವನ್ನು ಹೊರತುಪಡಿಸಿ ಆಧುನಿಕ ತಾಂತ್ರಿಕ ಜ್ನಾನವನ್ನು ವಿದ್ಯಾರ್ಥಿಗಳು ಹೆಚ್ಚಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ್ ಶೆಟ್ಟಿ ಮಾತನಾಡಿ ಹೊಸ ತಂತ್ರಜ್ನಾನವು ದಿನನಿತ್ಯದ ಜೀವನದ ಮೇಲೆ ಪ್ರಭಾವವನ್ನು ಬೀರುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ , ಸಂಪನ್ಮೂಲ ವ್ಯಕ್ತಿಗಳಾದ ಶಿವ ಶ್ರೀವಾಸ್ತವ ಮತ್ತು ಬಂಡನವಾಜ್ ಭಗವಾನ್ ಉಪಸ್ಥಿತರಿದ್ದರು.

Exit mobile version