Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಕಾರಂತಬೆಟ್ಟು ವಿಜಯ್ ಆತ್ಮಹತ್ಯೆಗೆ ಶರಣು

ಕುಂದಾಪುರ: ಇಲ್ಲಿನ ಬಿ.ಸಿ ರಸ್ತೆಯ ಕಾರಂತಬೆಟ್ಟು ನಿವಾಸಿ ವಿಜಯ್ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಎಂದಿನಂತೆ ಊಟ ಮಾಡಿ ಮಲಗಿದ್ದ ವಿಜಯ್ ಬೆಳಿಗ್ಗೆ ಮನೆಯಲ್ಲಿಲ್ಲದಿರುವುದನ್ನು ನೋಡಿ ಹುಡುಕಾಟ ನಡೆಸಿದಾಗ ಮನೆಯ ಹಿತ್ತಲಿನ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version