Kundapra.com ಕುಂದಾಪ್ರ ಡಾಟ್ ಕಾಂ

ಬ್ಯಾರೀಸ್ ಬಿ.ಎಡ್ ಕಾಲೇಜು: ವಿಶ್ವ ಜಲ ದಿನಾಚರಣೆ ಉಪನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋಡಿ ಬ್ಯಾರೀಸ್ ಬಿ.ಎಡ್ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದ ಕ್ಷೇತ್ರ sಸಂಪನ್ಮೂಲ ವ್ಯಕ್ತಿ ಉದಯ್ ಗಾಂವಕರ್, ಬಳಿಕ ವಿಶ್ವ ಜನದಿನಾಚರಣೆಯ ಅಂಗವಾಗಿ ಜಲ ನಿರ್ವಹಣೆ ಮತ್ತು ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ಅರಣ್ಯ ಸಂರಕ್ಷಣೆಯಿಂದ ಜಲ ಸಂಪನ್ಮೂಲವನ್ನು ರಕ್ಷಿಸಬಹುದು ಮತ್ತು ಸರಳ ಜೀವನ ಇಂತಹ ಜಟಿಲ ಸಮಸ್ಯೆಗಳಿಗೆ ಪರಿಹಾರ ನೀಡಬಲ್ಲದು ಎಂದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಮಾಸ್ಟರ್ ಮೆಹಮೂದ್ ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದರು. ಶಿಲ್ಪಶ್ರೀ ಸ್ವಾಗತಿಸಿ, ಸುನೀತಾ ಧನ್ಯವಾದಗೈದರು. ಪ್ರಶಿಕ್ಷಣಾರ್ಥಿ ಮಹಿಮಾ ನಿರೂಪಿಸಿದರು.

Exit mobile version