Kundapra.com ಕುಂದಾಪ್ರ ಡಾಟ್ ಕಾಂ

ನಾಗೂರು: ಬೈಕ್-ಟೆಂಪೊ ಟ್ರಾವೆಲರ್ ಡಿಕ್ಕಿ, ಬೈಕ್ ಸವಾರನ ದುರ್ಮರಣ

ಕಾರ್ತಿಕ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿಗೆ ಸಮೀಪದ ನಾಗೂರು ಎಂಬಲ್ಲಿ ಬೈಕೊಂದಕ್ಕೆ ಟೆಂಪೋ ಟ್ರಾವೆಲರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ. ಯರುಕೋಣೆಯ ನಿವಾಸಿ ಕಾರ್ತಿಕ್ ಶೆಟ್ಟಿ (23) ಮೃತ ದುರ್ದೈವಿ.

ಮಂಗಳವಾರ ಮುಂಜಾನೆ ಯಕ್ಷಗಾನವನ್ನು ನೋಡಿಕೊಂಡು ಉಪ್ಪುಂದ ಕಡೆಯಿಂದ ಯರುಕೋಣೆಯ ಮನೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಗಾಯಾಳು ಬಹಳ ಹೊತ್ತಿನವರೆಗೂ ರಸ್ತೆಯಲ್ಲಿ ಬಿದ್ದು ಒದ್ದಾಡಿ ಅಲ್ಲಿಯೇ ಅಸುನೀಗಿದರೆನ್ನಾಗಿದೆ. ಟೆಂಪೋ ಟ್ರಾವೆಲರ್ ಚಾಲಕ ಅಪಘಾತವಾದ ಬಳಿಕ ವಾಹನ ಸಹಿತ ಅಲ್ಲಿಂದ ಪರಾರಿಯಾಗಿದ್ದ.ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version