Site icon Kundapra.com ಕುಂದಾಪ್ರ ಡಾಟ್ ಕಾಂ

ಸಂಘಟನೆಯಿಂದ ದಲಿತರ ಸ್ವಾಭಿಮಾನ ಜಾಗೃತಿ: ಶ್ಯಾಮರಾಜ್ ಬಿರ್ತಿ

ನಾಡ: ಸಂವಿಧಾನದತ್ತ ಹಕ್ಕುಗಳನ್ನು ಪಡೆದು ಸರ್ವಾಂರ್ಗೀಣ ಅಭಿವೃದ್ಧಿಯತ್ತ ಸಾಗಲು ದಲಿತರಿಗೆ ದಲಿತರೇ ಇಂದು ಅಡ್ಡಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ದಲಿತರಲ್ಲಿನ ಒಗ್ಗಟ್ಟನ್ನು ಮುರಿದು ದಲಿತ ಚಳವಳಿಯನ್ನು ಬಲಿತರು ಹತ್ತಿಕ್ಕುವಂತಾಗಿದೆ. ದಲಿತ ಸಂಘರ್ಷ ಸಮಿತಿ ಎಂದರೆ ಕೇವಲ ಗಲಾಟೆ-ಗದ್ದಲ, ಕೇಸು, ಕೋರ್ಟು-ಕಚೇರಿ ಎಂದಷ್ಟೇ ತಪ್ಪುತಿಳಿಯುವಂತಾಗಿದೆ. ದಲಿತ ಸಂಘಟನೆ ಎಂದರೆ ದಲಿತರ ಸ್ವಾಭಿಮಾನ ಜಾಗೃತಿಯೇ ವಿನಾ ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ, ಗೊಂದಲವನ್ನು ಸೃಷ್ಟಿಸುವುದಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಉಡುಪಿ ಜಿಲ್ಲಾ ಸಮಿತಿ ಸಂಚಾಲಕ ಶ್ಯಾಮರಾಜ್ ಬಿರ್ತಿ ಅವರು ಹೇಳಿದರು.

Exit mobile version