Kundapra.com ಕುಂದಾಪ್ರ ಡಾಟ್ ಕಾಂ

ಎ.16: ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್ ರಿ. ಇದರ 11ನೇ ವಾರ್ಷಿಕೋತ್ಸವ ಸಮಾರಂಭವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಎ.16ರ ಶನಿವಾರ ಕಳವಾಡಿಯಲ್ಲಿ ವೈಭವದಿಂದ ಜರುಗಲಿದೆ. ಪ್ರತಿಭಾ ಪುರಸ್ಕಾರ, ನೃತ್ಯ, ಸಂಗೀತ, ನಾಟಕ ಮುಂತಾದ ಮನೋರಂಜನಾ ಕಾರ್ಯಕ್ರಮಗಳು ಜರುಗಲಿದೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಸಭಾ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಲಿದ್ದಾರೆ. ಈ ಸಂದರ್ಭದಲ್ಲಿ ಊರಿನ ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸ್ಥಳೀಯ ಪ್ರತಿಭೆಗಳು ಹಾಗೂ ಸುರಭಿ ಬೈಂದೂರು ತಂಡದಿಂದ ನೃತ್ಯ, ಹೇನಬೇರ್ ರಾಮಚಂದ್ರ ಹಾಗೂ ಯದುರಾಜ್ ಅವರಿಂದ ಸಂಗೀತ ಕಾರ್ಯಕ್ರಮ, ಭೂಮಿಕಾ ಹಾರಾಡಿ ಇವರಿಂದ ಅರಗಿನ ಬೆಟ್ಟ ನಾಟಕ ಜರುಗಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Shri Marikamba youth club Kalavadi byndoor (2)

Exit mobile version