Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು ದೇವಳಕ್ಕೆ ಮಲಯಾಳಂ ನಟ ಸುರೇಶ್ ಗೋಪಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಸುರೇಶ್ ಗೋಪಿ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಸುಮಾರು 25ವರ್ಷಗಳಿಂದ ಮಳಯಾಳಂ ಚಿತ್ರರಂಗದಲ್ಲಿ ಅಭಿನಯಿಸುತ್ತಿರುವ ಸುರೇಶ್ ಗೋಪಿ, ಪೊಲೀಸ್ ಪಾತ್ರಗಳಲ್ಲಿ ಆಂಗ್ರಿ ಯಂಗ್ ಮ್ಯಾನ್ ಆಗಿ ಮಿಂಚುತ್ತಾ ಬಂದವರು. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯ ಬಗ್ಗೆ ಪ್ರಶಂಸಿಸುತ್ತಾ ಬಂದಿದ್ದ ಅವರು ಇತ್ತಿಚಿಗಷ್ಟೇ ಕೇರಳದಲ್ಲಿ ಬಿಜೆಪಿಗೆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

ಸುರೇಶ್ ಗೋಪಿ ಕೊಲ್ಲೂರಿಗೆ ಭೇಟಿ ನೀಡಿದ ಸಂದರ್ಭ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸುಕುಮಾರ ಶೆಟ್ಟಿ, ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷ ರಾಜೇಶ್ ಕಾವೇರಿ ಬರಮಾಡಿಕೊಂಡಿದ್ದಾರೆ.

Exit mobile version