Kundapra.com ಕುಂದಾಪ್ರ ಡಾಟ್ ಕಾಂ

ತ್ರಾಸಿ: ತಾಯಿ-ಮಗಳ ಮೇಲೆ ಟ್ಯಾಂಕರ್ ಹರಿದು ಸ್ಥಳದಲ್ಲೇ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ತ್ರಾಸಿ ಬಳಿ ಬೈಕ್ ಹಾಗೂ ಟ್ಯಾಂಕರ್ ನಡುವೆ ನಡೆದ ಭೀಕರ ಅಫಘಾತದಲ್ಲಿ ತಾಯಿ ಮಗಳು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಬೈಂದೂರ ಸಮೀಪದ ಮೂಡನಗದ್ದೆ ಸರೋಜಾ ಗಾಣಿಗ (35) ಹಾಗೂ ಆಕೆಯ ಮಗಳು ಮೃತಪಟ್ಟಿದ್ದು, ಮೃತರ ಸಹೋದರ ಬೈಕ್ ಸವಾರ ವಿಶ್ವನಾಥ ಗಾಣಿಗ ಗಂಭೀರ ಗಾಯಗೊಂಡಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

ಘಟನೆಯ ವಿವರ:
ವಿಶ್ವನಾಥ ಗಾಣಿಗ ತನ್ನ ಬೈಕಿನಲ್ಲಿ ಸಹೋದರಿ ಸರೋಜಾ ಹಾಗೂ ಆಕೆ ಮಗಳನ್ನು ಕೂರಿಸಿಕೊಂಡು ಕುಂದಾಪುರದ ಆಸ್ಪತ್ರೆಗೆ ತೆರಳುತ್ತಿದ್ದರು. ತ್ರಾಸಿಯ ಅಣ್ಣಪ್ಪಯ್ಯ ಸಭಾ ಭವನದ ಬಳಿ ಪ್ರಯಾಣಿಕರನ್ನು ಹತ್ತಿಸಲು ರಸ್ತೆಯ ಮೇಲೆಯೆ ನಿಂತಿದ್ದ ಬಸ್ಸನ್ನು ಹಿಂದಿಕ್ಕಿ ಮುಂದೆ ಸಾಗಲು ಪ್ರಯತ್ನಿಸುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ಬಸ್ಸಿನ ಬಲಭಾಗಕ್ಕೆ ಬೈಕ್ ಢಿಕ್ಕಿ ಹೊಡೆದು ಹಿಂಬದಿ ಕುಳಿತಿದ್ದ ತಾಯಿ ಮಗು ರಸ್ತೆಗೆ ಬಿದ್ದಿದ್ದರು. ಇದೇ ಸಂದರ್ಭದಲ್ಲಿ ಎದುರಿಗೆ ಇದ್ದ ಟ್ಯಾಂಕರ್ ತಾಯಿ ಮಗುವಿನ ಮೇಲೆ ಹರಿದಿದ್ದರಿಂದ ಈರ್ವರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕ್ ಸವಾರ ವಿಶ್ವನಾಥ ಅವರಿಗೆ ಗಂಭೀರ ಗಾಯಗೊಂಡಿದ್ದು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಠಾಣಾಧಿಕಾರಿ ಸುಬ್ಬಣ್ಣ ಹಾಗೂ ಸಿಬ್ಬಂಧಿಗಳೂ ಭೇಟಿ ನೀಡಿದ್ದು, ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. / ಕುಂದಾಪ್ರ ಡಾಟ್ ಕಾಂ ಸುದ್ದಿ/

Exit mobile version