Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರದ ಮೂವರು ಎಸ್.ಎಸ್.ಎಲ್.ಸಿ ಸಾಧಕರು. 625ರಲ್ಲಿ 622 ಅಂಕ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿನ ಮೂವರು ವಿದ್ಯಾರ್ಥಿಗಳು 625ರಲ್ಲಿ 622ಅಂಕಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಕುಂದಾಪುರ ಎಜುಕೇಶನ್ ಸೊಸೈಟಿಯ ಪ್ರವರ್ತಿತ ವಿ.ಕೆ.ಆರ್. ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಎಚ್. ವಿವೇಕ್ ಗಿರಿಧರ ಪೈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ
622 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಚೈತ್ರ ಶಾನುಭೋಗ್ 622 ಅಂಕಗಳಿಸಿ ಉತ್ತಮ ಸಾಧನೆಗೈಧಿದ್ದಾಳೆ.

ತಾಲೂಕಿನ ಬಸ್ರೂರು ಸರಕಾರಿ ಪ್ರೌಢಶಾಲೆಯ ಆಂಗ್ಲ ಮಾಧ್ಯಮ ವಿಭಾಗದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ವೆಂಕಟೇಶ್ ಪುರಾಣಿಕ್ 625ರಲ್ಲಿ 622 ಅಂಕ ಗಳಿಸಿ ತಾಲೂಕಿಗೆ ಮಾದರಿ
ಸಾಧನೆಗೈದಿದ್ದಾನೆ.

► ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿವೇಕ್‌ಗೆ ಎಸ್‌ಎಸ್‌ಎಲ್‌ಸಿಯಲ್ಲಿ 622 ಅಂಕ – http://kundapraa.com/?p=14210 .
►ಬಸ್ರೂರು ಸರಕಾರಿ ಶಾಲೆಯ ವಿದ್ಯಾರ್ಥಿ ವೆಂಕಟೇಶ್‌ಗೆ 622 ಅಂಕ – http://kundapraa.com/?p=14215 .

 

Exit mobile version