Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಪ್ರೀತಿ ನಿರಾಕರಣೆ, ಯುವಕ ನೇಣಿಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಯಡ್ತರೆ ಗ್ರಾಪಂ ವ್ಯಾಪ್ತಿಯ ಕುಂಜಳ್ಳಿ ಎಂಬಲ್ಲಿ ಯುವಕನೋರ್ವ ಗೇರುಮರಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ವರದಿಯಾಗಿದೆ. ಕುಂಜಳ್ಳಿಯ ನಿವಾಸಿ ನಾರಾಯಣ ಶೆಟ್ಟಿ ಎಂಬುವವರ ಮಗ ಪ್ರವೀಣ್ (25) ಆತ್ಮಹತ್ಯೆಗೆ ಶರಣಾದ ದುರ್ದೈವಿ. ತನ್ನ ಪರಿಚಿತ ಯುವತಿ ಪ್ರೀತಿಯನ್ನು ನಿರಾಕರಿಸಿದ್ದರಿಂದ ಹತಾಶನಾದ ಯುವಕ ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದ್ದು, ತನಿಕೆ ನಡೆಯುತ್ತಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version