Kundapra.com ಕುಂದಾಪ್ರ ಡಾಟ್ ಕಾಂ

ನವಗ್ರಹ ವಾಸ್ತು ಪುರಸ್ಪರ ಶ್ರೀ ಮಹಾವಿಷ್ಣು ಯಾಗದ ಮಹಾಪೂರ್ಣಾಹುತಿ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ: ಗಂಗೊಳ್ಳಿಯ ಆಪ್ತ ಇಷ್ಟ ಮಿತ್ರ ಮಂಡಳಿ ವತಿಯಿಂದ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ವ್ಯವಸ್ಥಾಪಕ ಸಮಿತಿ ಸಹಕಾರದೊಂದಿಗೆ ಶ್ರೀ ವೆಂಕಟರಮಣ ದೇವರ ಭಜಕರ ಶ್ರೇಯೋಭಿವೃದ್ಧಿಗಾಗಿ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುತ್ತಿರುವ ನವಗ್ರಹ ವಾಸ್ತು ಪುರಸ್ಪರ ಶ್ರೀ ಮಹಾವಿಷ್ಣು ಯಾಗದ ಮಹಾಪೂರ್ಣಾಹುತಿ ಕಾರ್ಯಕ್ರಮ ಜರಗಿತು.

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ದಿವ್ಯ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಯಜ್ಞದ ಧಾರ್ಮಿಕ ವಿಧಿವಿಧಾನಗಳು ಶಾಸ್ತ್ರೋಕ್ತವಾಗಿ ನಡೆಯಿತು. ಬಳಿಕ ಶ್ರೀದೇವರಿಗೆ ಮಹಾಪೂಜೆ, ರಾತ್ರಿ ಶ್ರೀದೇವರ ಪಲ್ಲಕಿ ಉತ್ಸವ ಮೊದಲಾದವುಗಳು ವಿಜೃಂಭಣೆಯಿಂದ ಜರಗಿತ. ಶ್ರೀ ಮಹಾವಿಷ್ಣು ಯಾಗದ ಅಂಗವಾಗಿ ಶ್ರೀ ವೆಂಕಟರಮಣ ದೇವರಿಗೆ ಶ್ರೀಗಂಧ ಲೇಪನ ಸೇವೆ ಮಂಗಳವಾರ ಜರಗಿತು.

ಆಪ್ತ ಇಷ್ಟ ಮಿತ್ರ ಮಂಡಳಿ ಅಧ್ಯಕ್ಷ ಎಂ.ರಾಮಕೃಷ್ಣ ಪೈ ದಂಪತಿಗಳ ಯಜಮಾನಿಕೆಯಲ್ಲಿ ವೇದಮೂರ್ತಿ ಜಿ.ನಾರಾಯಣ ವಿಶ್ವನಾಥ ಆಚಾರ್ಯ, ವೇದಮೂರ್ತಿ ಜಿ.ವಸಂತ ಭಟ್, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ವೈದಿಕರು, ಪುರೋಹಿತರು, ದೇವಳದ ಆಡಳಿತ ಮಂಡಳಿ ಸದಸ್ಯರು, ಆಪ್ತ ಇಷ್ಟ ಮಿತ್ರ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಜಿಎಸ್‌ಬಿ ಸಮಾಜ ಬಾಂಧವರು ಹಾಗೂ ಭಕ್ತರು ಉಪಸ್ಥಿತರಿದ್ದರು.

Exit mobile version