Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಮೆಸ್ಕಾಂ ನಿವೃತ್ತ ನೌಕರ ಶ್ರೀನಾಗ ಪೂಜಾರಿ ಅವರಿಗೆ ಬೀಳ್ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಮೆಸ್ಕಾಂ ನಲ್ಲಿ ಲೈನ್ ಮ್ಯಾನ್ ಆಗಿ ಸುಮಾರು ೩೮ ವರುಷ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀನಾಗ ಪೂಜಾರಿ ಅವರನ್ನು ಕುಂದಾಪುರದ ಮೆಸ್ಕಾಂ ಕಛೇರಿಯಲ್ಲಿ ಬೀಳ್ಕೋಡಲಾಯಿತು. ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಯನಿರ್ವಾಹಕ ಇಂಜಿನಿಯರ್ ಪುಟ್ಟಸ್ವಾಮಿ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಅಧಿಕಾರಿಗಳಾದ ಅಶೋಕ್ ಪೂಜಾರಿ, ರಾಘವೇಂದ್ರ, ಅಶೋಕ್ ಅಂಕೋಲ್ದೇಕರ್, ಕೃಷ್ಣಮೂರ್ತಿ ಹಾಗೂ ನೌಕರರ ಸಂಘದ ಬಾಬಣ್ಣ ಪೂಜಾರಿ, ಮಲ್ಲಿಕಾರ್ಜುನ. ಎಸ್ ಉಳ್ಳಾಗಡ್ಡಿ, ಉಪಸ್ಧಿತರಿದ್ದರು.

ಶ್ರೀನಾಗ ಪೂಜಾರಿ ಅವರು ರೋಟರಿ ಕುಂದಾಪುರ ವತಿಯಿಂದ ಬೆಸ್ಟ್ ಲೈನಮ್ಯಾನ್ ಪ್ರಶಸ್ತಿಯನ್ನು. ಹಾಗೆಯೇ ಇಂಜಿನಿಯರಿಂಗ್ ಅಸೋಸಿಯೇಷನ್ ವತಿಯಿಂದ ಬೆಸ್ಟ್ ಕಂಪನಿ ಲೈನಮಾನ್ ಪ್ರಶಸ್ತಿಯನ್ನು ಹಾಗೂ ಮೆಸ್ಕಾಂ ಮಟ್ಟದಲ್ಲಿ ಉತ್ತಮ ಮಾರ್ಗದಾಳು ಪ್ರಶಸ್ತಿಯನ್ನು ಪಡೆದಿದ್ದು ಕುಂದಾಪುರದ ಶಾಖೆಯಲ್ಲಿ ಹದಿನಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ಜನಮನ್ನಣೆ ಗಳಿಸಿದ್ದರು.

Exit mobile version