Kundapra.com ಕುಂದಾಪ್ರ ಡಾಟ್ ಕಾಂ

ಮರವಂತೆ ‘ಸಾಧನಾ’ ಆಶ್ರಯದಲ್ಲಿ ನೇತ್ರ ಪರೀಕ್ಷಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮರವಂತೆಯ ಸೇವಾ, ಸಾಂಸ್ಕೃತಿಕ ವೇದಿಕೆ ’ಸಾಧನಾ’ ಆಶ್ರಯದಲ್ಲಿ ಉಡುಪಿಯ ಪ್ರಸಾದ್ ನೇತ್ರಾಲಯ, ನೇತ್ರಜ್ಯೋತಿ ಚಾರಿಟಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಅಂಧತ್ವ ನಿವಾರಣಾ ವಿಭಾಗದ ನೆರವಿನೊಂದಿಗೆ ಅಲ್ಲಿನ ಸಾಧನಾ ಸಮುದಾಯ ಭವನದಲ್ಲಿ ರವಿವಾರ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ನಡೆಯಿತು.

ಪ್ರಸಾದ್ ನೇತ್ರಾಲಯದ ನೇತ್ರ ತಜ್ಞ ಡಾ. ಜೋಯಲ್ ಶಿಬಿರವನ್ನು ಉದ್ಘಾಟಿಸಿದರು. ಸಾಧನಾ ಅಧ್ಯಕ್ಷ ಗುರುದಾಸ್ ವಿ. ಶ್ಯಾನುಭಾಗ್ ಅಧ್ಯಕ್ಷತೆ ವಹಿಸಿದ್ದರು. ಶಿಬಿರದಲ್ಲಿ ೮೮ ಜನರು ಕಣ್ಣು ತಪಾಸಣೆ ಮಾಡಿಸಿಕೊಂಡರು. ಅವರಲ್ಲಿ ೧೮ ಜನರನ್ನು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಮಾಡಲಾಯಿತು. ಸಾಧನಾ ಸದಸ್ಯ ಜತೀಂದ್ರ ಮರವಂತೆ ಸ್ವಾಗತಿಸಿ, ವಂದಿಸಿದರು. ಸಾಧನಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Exit mobile version