Kundapra.com ಕುಂದಾಪ್ರ ಡಾಟ್ ಕಾಂ

ಶಿರೂರು: ಗ್ರೀನ್‌ವ್ಯಾಲಿ ಶಾಲಾ ವಾಹನಕ್ಕೆ ಕಾರು ಡಿಕ್ಕಿ. ವಿದ್ಯಾರ್ಥಿಗಳು ಪಾರು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಮೀಪದ ಶಿರೂರು ಗ್ರೀನ್‌ವ್ಯಾಲಿ ಖಾಸಗಿ ಶಾಲಾ ಬಸ್ಸಿಗೆ ಕಾರು ಡಿಕ್ಕಿಯಾದ ಘಟನೆ ಶಿರೂರು ಸಂಕದಗುಂಡಿ ಎಂಬಲ್ಲಿ ನಡೆದಿದ್ದು, ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.

ಶಾಲೆ ಮುಗಿದ ಬಳಿಗೆ ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಕುಂದಾಪುರ ಕಡೆಗೆ ತೆರಳುತ್ತಿದ್ದ ಐಟ್ವೆಂಟಿ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನುಜ್ಜುನುಜ್ಜಾಗಿದೆ. ಬಸ್ಸಿನಲ್ಲಿರುವ ವಿದ್ಯಾರ್ಥಿಗಳಿಗೆ ಹಾಗೂ ಕಾರಿನಲ್ಲಿಸದ್ದವರು ಅಪಾಯದಿಂದ ಪಾರಾಗಿದ್ದಾರೆ. ವಿದ್ಯಾರ್ಥಿಗಳನ್ನು ಬದಲಿ ಶಾಲಾ ವಾಹನದಲ್ಲಿ ಸುರಕ್ಷಿತವಾಗಿ ಕಳುಹಿಸಿಕೊಡಲಾಯಿತು. ಕುಂದಾಪ್ರ ಡಾಟ್ ಕಾಂ ಸುದ್ದಿ

ತ್ರಾಸಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಎಂಟು ಮಂದಿ ವಿದ್ಯಾರ್ಥಿಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಹಸಿಯಾಗಿರುವಾಗಲೇ ತಾಲೂಕಿನಲ್ಲಿ ಮತ್ತೊಂದು ಅಫಘಾತ ನಡೆದಿರುವುದು ಪೊಷಕರ ನಿದ್ದೆಗೆಡಿಸಿದೆ./ ಕುಂದಾಪ್ರ ಡಾಟ್ ಕಾಂ ಸುದ್ದಿ/

Exit mobile version