Kundapra.com ಕುಂದಾಪ್ರ ಡಾಟ್ ಕಾಂ

ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆ ಪುಡಿ, ಮನೆಮಂದಿಗೆ ಗಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಪಡುವರಿ ಗ್ರಾಪಂ ವ್ಯಾಪ್ತಿಯ ಸೋಮೇಶ್ವರದ ಭಂಡಾರಿಮನೆ ಬಚ್ಚಿ ನಾರಾಯಣ ಮೋಗವೀರ ಎಂಬುವರ ಮನೆಯ ಮೇಲೆ ಭಾರಿ ಗಾಳಿ ಮಳೆಯಿಂದಾಗಿ ತೆಂಗಿನಮರ ಉರುಳಿ ಮನೆ ಸಂಪೂರ್ಣ ಹಾನಿಗೀಡಾದ ಘಟನೆ ವರದಿಯಾಗಿದೆ.

ಅಪಾರ ಹಾನಿ:
ಮಧ್ಯಾಹ್ನದ ಸಮಯದಲ್ಲಿ ಮನೆಯ ಮೇಲೆ ಮರ ಬಿದ್ದಿದ್ದು, ಮೂರು ದಿನಗಳ ಹಿಂದೆ ಶಸ್ತ್ರಚಿಕಿತ್ಸೆಯಾಗಿ ವಿಶ್ರಾಂತಿ ಪಡೆಯುತ್ತಿದ್ದ ಕೃಷ್ಣ ಮೊಗವೀರ ಎಂಬುವವರಿಗೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದೆ. ತಕ್ಷಣ ಇವರಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಉಳಿದಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಟಿವಿ, ಗ್ರೈಂಡರ್, ಗ್ಯಾಸ್ ಸ್ಟೋವ್ ಸೇರಿದಂತೆ ವಿದ್ಯುತ್ ಉಪಕರಣಗಳು ಹಾನಿಗೀಡಾಗಿದ್ದು ಸುಮಾರು ರೂ. 3 ಲಕ್ಷ ನಷ್ಟ ಅಂದಾಜಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ

ಪಡುವರಿ ಗ್ರಾಪಂ ಅಧ್ಯಕ್ಷೆ ದೀಪಾ ಶೆಟ್ಟಿ, ಉಪಾಧ್ಯಕ್ಷ ಸದಾಶಿವ ಡಿ. ಪಡುವರಿ, ಪಿಡಿಒ ಮಂಜುನಾಥ ಶೆಟ್ಟಿ, ಗ್ರಾಮ ಕರಣಿಕ ಪ್ರಕಾಶ್, ಜಿಪಂ ಅಭಿಯಂತರ ಅರುಣ್‌ಕುಮಾರ್ ಸುದ್ಧಿ ತಿಳಿದು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ /ಕುಂದಾಪ್ರ ಡಾಟ್ ಕಾಂ ಸುದ್ದಿ/

Exit mobile version